Puttur: ಬೈಕ್‌ ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಉಪನ್ಯಾಸಕಿ ನಿಧನ

0

ಪುತ್ತೂರು: ಕೆಲ ದಿನಗಳ ಹಿಂದೆ ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ,ಕೆಪಿಎಸ್‌ ಕೆಯ್ಯೂರು ಪದವಿ ಪೂರ್ವ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿದ್ದ ಸುನಂದ ಅಚ್ಚುತ ಪೂಜಾರಿಯವರು ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದ ಸಂದರ್ಭದಲ್ಲಿ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಬಳಿಕ ಆಪರೇಶನ್ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ (ಸೆ.11) ನಿಧನರಾದರು ಎಂದು ತಿಳಿದುಬಂದಿದೆ.

ಸುಳ್ಯದ ಬೀರಮಂಗಲ ನಿವಾಸಿ, ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಂದೆ ಪ್ರಾಂಶುಪಾಲರಾಗಿದ್ದು, ಈಗ ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ. ಅಚ್ಚುತ ಪೂಜಾರಿಯವರ ಪತ್ನಿಯಾಗಿದ್ದಾರೆ.

LEAVE A REPLY

Please enter your comment!
Please enter your name here