ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ.ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ, ನೋಟರಿ ಸಾಯಿರಾ ಝುಬೇರ್ ನೇಮಕ

0

ಪುತ್ತೂರು ಬಾಲನ್ಯಾಯ ಕಾಯ್ದೆ ಮಂಡಳಿ ಇದರ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ನೋಟರಿ ಸಾಯಿರಾ ಝುಬೇರ್‌ರವರು ನೇಮಕಗೊಂಡಿದ್ದಾರೆ. ಪುತ್ತೂರು ದರ್ಬೆ ನಿವಾಸಿಯಾಗಿರುವ ಸಾಯಿರಾ ಝುಬೇರ್‌ರವರು ಪ್ರಸ್ತುತ ಹೈಕೋರ್ಟಿನ ವಕೀಲೆಯಾಗಿದ್ದಾರೆ.


ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿಯ ಪದಾಽಕಾರಿಯಾಗಿದ್ದ ಇವರು ಪ್ರಸ್ತುತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ದರ್ಬೆ ನಿವಾಸಿ, ಪ್ರಕಾಶ್ ಪೂಟ್ ವೇರ್ ಮಾಲಕ ರಾಗಿದ್ದ ಅಬ್ದುಲ್ ರೆಹಮಾನ್ ಅಪ್ಸಾರಹೀಮ್ ರವರ ಪುತ್ರಿಯಾಗಿರುವ ಸಾಹಿರಾ ಝುಬೇರ್‌ರವರು ಕಿಲಾಬ್ ಜುಬೈರ್‌ರವರ ಪತ್ನಿ . ಇವರ ಪುತ್ರ ಅಬ್ದುಲ್ ರಹೀಮ್ ನಿಹಾಲ್‌ರವರು ಬೆಂಗಳೂರಿನಲ್ಲಿ ಹೈಕೋರ್ಟ್ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here