ಸೆ.15:ಆಲಂಕಾರಿನಲ್ಲಿ ಶತಾಕ್ಷಿ ಕ್ಲಿನಿಕ್ ಮತ್ತು ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

0

ಆಲಂಕಾರು: ಆಲಂಕಾರಿನಲ್ಲಿ ಶತಾಕ್ಷಿ ಕ್ಲಿನಿಕ್ ಮತ್ತು ಕ್ಲಿನಿಕಲ್ ಲ್ಯಾಬೋರೇಟರಿ ಸೆ.15 ರಂದು ಶ್ರೀ ಮಾತಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ.

ಖ್ಯಾತ ವಾಸ್ತು ತಜ್ಞ ಮಹೇಶ ಮುನಿಯಂಗಳ ದೀಪ ಪ್ರಜ್ವಲನೆ ಮಾಡಲಿದ್ದು, ಆಲಂಕಾರು ಗ್ರಾ.ಪಂ ಅಧ್ಯಕ್ಷೆ ಸುಶೀಲಾ ಅಧ್ಯಕ್ಷತೆ ವಹಿಸಲಿದ್ದು, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಕ್ಲಿನಿಕ್ ಉದ್ಘಾಟನೆ ಮಾಡಲಿದ್ದಾರೆ.ಲ್ಯಾಬೋರೇಟರಿ ಹಾಗೂ ಜನರಲ್ ವಾರ್ಡ್ ಉದ್ಘಾಟನೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಆಶೋಕ್ ಕುಮಾರ್ ರೈ ನೇರವೆರಿಸಲಿದ್ದು, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು ಹೋರ ರೋಗಿ ಕೊಠಡಿಯ ಉದ್ಘಾಟನೆಯನ್ನು ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕುಂತೂರು ಸೈಂಟ್ ಮೇರಿಸ್ ಚರ್ಚ್ ಫಾದರ್ ಅನಿಶ್ ಪೆರಾಶೆರಿಲ್,ಕುಂತೂರು ಜಮ್ಮಾ ಮಸೀದಿಯ ಮುಖ್ಯಗುರು ಜನಾಬ್ ಮೊಯಿದ್ಪೈ ಝ,ಎ.ಪಿಎಂ.ಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ,ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ ಇದರ ಕಾರ್ಯದರ್ಶಿ ಸೇಸಪ್ಪ ರೈ ಕೆ, ಉಪ್ಪಿನಂಗಡಿ ಧನ್ವಂತರಿ ಕ್ಲಿನಿಕ್ ನ ಡಾ.ನಿರಂಜನ್ ರೈ,ಆಲಂಕಾರು ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ರಾವ್ ನಗ್ರಿ, ಆಲಂಕಾರು ಮೂರ್ತೆದಾರ ಸಹಕಾರಿ ಸಂಘದ ಅಧ್ಯಕ್ಷ ಮುತ್ತಪ್ಪ ಪೂಜಾರಿ ನೈಯ್ಯಲ್ಗ ,ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ, ಆಲಂಕಾರು ಮಾತಾ ಕಾಂಪ್ಲೆಕ್ಸ್ ನ ಮಾಲಕ ಕುಶಾಲಪ್ಪ ಗೌಡ ಸುರುಳಿ,ಆಲಂಕಾರು ಆಕಾರ್ ಅಸೋಸಿಯೇಟ್ಸ್ ನ ಸಿವಿಲ್ ಇಂಜೀನಿಯರ್ ಲಕ್ಷ್ಮೀ ನಾರಾಯಣ ಅಲೆಪ್ಪಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಡಾ. ಕೃತಿ ಶೆಟ್ಟಿ ಎಂ.ಬಿ.ಬಿ.ಎಸ್ ,ವತ್ಸಲಾ ಮತ್ತು ನಿವೃತ್ತ ಕೃಷಿ ಅಧಿಕಾರಿ ಪದ್ಮನಾಭ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here