ಬಲ್ಯ: ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧ ಸಾವು

0

ನೆಲ್ಯಾಡಿ: ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧರೋರ್ವರು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದಲ್ಲಿ ನಡೆದಿದೆ.
ಬಲ್ಯ ಗ್ರಾಮದ ದೇರಾಜೆ ಮಾದೇರಿಕೆ ನಿವಾಸಿ ಕುಶಾಲಪ್ಪ ಗೌಡ(75ವ.)ಮೃತಪಟ್ಟವರಾಗಿದ್ದಾರೆ. ಇವರು ಕಳೆದ 2 ವರ್ಷಗಳಿಂದ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದು ಈ ಬಗ್ಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರೂ ಸರಿಯಾಗಿ ಗುಣಮುಖವಾಗಿರುವುದಿಲ್ಲ ಎಂದು ಮಾನಸಿಕವಾಗಿ ನೊಂದುಕೊಂಡಿದ್ದರು. ಸೆ.12ರಂದು ಮಧ್ಯಾಹ್ನ 3.30ರ ವೇಳೆಗೆ ಒಬ್ಬರೇ ಮನೆಯಲಿದ್ದ ಸಮಯ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು. ತೋಟಕ್ಕೆ ಹೋಗಿದ್ದ ಅವರ ಪತ್ನಿ ಮತ್ತು ತಂಗಿ ಮನೆಗೆ ಬಂದ ವೇಳೆ ಕುಶಾಲಪ್ಪ ಗೌಡರು ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್‌ನಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಯ ವೈದ್ಯರು ಪರೀಕ್ಷಿಸಿ ಕುಶಾಲಪ್ಪ ಗೌಡರವರು ಮೃತಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಬಗ್ಗೆ ಮೃತರ ಪುತ್ರಿ ಕುಸುಮಾವತಿ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here