ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಕೂಡಿ ಬಂದ ಮುಹೂರ್ತ : ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

0

ಪುತ್ತೂರು: 2025ರ ಸೆಫ್ಟಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲಾದಲ್ಲಿ (koila farm) ಪಶು ವೈಧ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ (Ashok Kumar Rai) ತಿಳಿಸಿದ್ದಾರೆ. ಸೆ.13ರಂದು ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ (Animal Husbandry Department) ಪ್ರಮುಖರನ್ನು ಭೇಟಿಯಾದ ಶಾಸಕರು ಕೊಯಿಲಾ ಪಶು ವೈಧ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

‘ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದೆ, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲಭೂತ ಸೌಕರ್ಯಗಳಿಗಾಗಿ ಸರಕಾರ ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕು ಮತ್ತು ಒಂದು ವರ್ಷದೊಳಗೆ ಕಾಲೇಜು ಪ್ರಾರಂಭವಾಗಬೇಕು..’ ಎಂದು ಶಾಸಕರು ಮನವಿ ಮಾಡಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಪಶುಸಂಗೋಪನಾ ಸಚಿವಾಲಯ ಈ ಬಗ್ಗೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಶಾಸಕರಿಗೆ ತಿಳಿಸಿದ್ದಾರೆ.

ಹಸು,ಹಂದಿ, ಕುರಿ ಸಾಕಾಣಿಕೆಗೆ ಅವಕಾಶ
ಕೊಯಿಲಾದಲ್ಲಿರುವ ವಿಸ್ತಾರವಾದ ಜಾಗದಲ್ಲಿ ಪಶು ವೈಧ್ಯಕೀಯ ಕಾಲೇಜಿಗೆ ಪೂರಕವಾಗಿ ಇರಬೇಕಾದ ಅಗತ್ಯ ಕ್ರಮಗಳನ್ನು ಮಾಡಿಕೊಳ್ಳುವುದರ ಜೊತೆ ಹೊರ ಗುತ್ತಿಗೆ ಆಧಾರದಲ್ಲಿ ಸ್ಥಳದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶ ನೀಡುವಂತೆ ಶಾಸಕರು ಮನವಿ ಮಾಡಿದ್ದರು. ಈ ಮನವಿಗೆ ಇಲಾಖೆ ಸ್ಪಂದಿಸಿದ್ದು ಹೊರ ಗುತ್ತಿಗೆ ಆಧಾರದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶವನ್ನು ಕಲ್ಪಿಸಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕೊಯಿಲಾ ಜಾನುವಾರ ಕೇಂದ್ರದ ಕಟ್ಟಡದಲ್ಲಿ ಮುಂದಿನ ಒಂದು ವರ್ಷದೊಳಗೆ ಪಶು ವೈಧ್ಯಕೀಯ ಕಾಲೇಜು ಆರಂಭವಾಗವುದರೊಂದಿಗೆ ಈ ಭಾಗದ ಕನಸು ನನಸಾಗಲಿದೆ.

‘ಶಾಸಕನಾದ ಆರಂಭದಲ್ಲೇ ಕೊಯಿಲಾ ಜಾನುವಾರು ಕೇಂದ್ರದಲ್ಲಿ ಪಶು ವೈಧ್ಯಕೀಯ ಕಾಲೇಜು ಪ್ರಾರಂಭವಾಗಬೇಕು ಎಂದು ಕನಸು ಕಂಡಿದ್ದೆ, ಆಕನಸು ನನಸಾಗುವ ಕಾಲ ಬಂದಿದೆ. ಅಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಸರಕಾರ ಮಾಡಲಿದೆ ಮತ್ತು ಹಸು, ಹಂದಿ ಮತ್ತು ಕುರಿ ಸಾಕಾಣಿಕೆಗೂ ಅವಕಾಶವನ್ನು ಕಲ್ಪಿಸುವ ಮೂಲಕ ನನ್ನ ಬೇಡಿಕೆಯನ್ನು ಸರಕಾರ ಮಾನ್ಯ ಮಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ಸೆಫ್ಟಂಬರ್ ತಿಂಗಳಿನಲ್ಲಿ ಸಿ.ಎಂ. ಸಿದ್ದರಾಮಯ್ಯ ಅವರೇ ಕೊಯಿಲ ಪಶುವೈಧ್ಯಕೀಯ ಕಾಲೇಜನ್ನು ಉದ್ಘಾಟನೆ ಮಾಡಲಿದ್ದಾರೆ.
— ಅಶೋಕ್ ರೈ, ಶಾಸಕರು, ಪುತ್ತೂರು

LEAVE A REPLY

Please enter your comment!
Please enter your name here