ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ- ಶಿಕ್ಷಕನ ವಿರುದ್ಧ ದೂರು

0

ಉಪ್ಪಿನಂಗಡಿ: ಶಾಲೆಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ದ್ವೇಷದ ಭಾವನೆಯಿಂದ ಸತತ ಮೂರು ದಿನ ಶಿಕ್ಷಕರೋರ್ವರು ಬೆತ್ತದಿಂದ ಹಲ್ಲೆ ನಡೆಸಿದ್ದು, ಹಲ್ಲೆಗೆ ಒಳಗಾದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆ ನಡೆಸಿದ ಆರೋಪಿ ಶಿಕ್ಷಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕು ಉರುವಾಲು ನಿವಾಸಿಯಾಗಿದ್ದು, ಪದ್ಮುಂಜ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ. ಹಲ್ಲೆ ನಡೆಸಿರುವ ಆರೋಪಿ ಇಂಗ್ಲೀಷ್ ಶಿಕ್ಷಕ
ಅನಂತ ಕುಮಾರ್ ಎಂದು ಆಪಾದಿಸಲಾಗಿದೆ. ಆರೋಪಿ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸೆ. 9,10, 11ರ 3 ದಿನಗಳಿಂದ ಹಲ್ಲೆ ನಡೆಸಿದ್ದು, ಈ ವಿಚಾರವನ್ನು ವಿದ್ಯಾರ್ಥಿ ಯಾರಿಗೂ ತಿಳಿಸದೆ ಸುಮ್ಮನಿದ್ದುದಾಗಿಯೂ, ಬಳಿಕ ನೋವು ಜಾಸ್ತಿಯಾದ ಕಾರಣ ಮನೆಯವರಿಗೆ ಈತ ವಿಚಾರ ತಿಳಿಸಿದ್ದಾನೆ. ಆ ಬಳಿಕ ಮನೆಯವರು ವಿದ್ಯಾರ್ಥಿಯನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ.
ಈ ಮಧ್ಯೆ ಆರೋಪಿ ಅತಿಥಿ ಶಿಕ್ಷಕ ಅನಂತ ಕುಮಾರ್ ತನ್ನ ಮೇಲೆ ದೌರ್ಜನ್ಯವೆಸಗಲಾಗಿದೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಪೊಲೀಸರಿಗೆ ಮಾಹಿತಿ ಬಂದಿದ್ದು, ತನಿಖೆಯಿಂದಷ್ಟೇ ಒಟ್ಟು ಪ್ರಕರಣದ ಒಳಗಿನ ನೈಜ ಸತ್ಯ ಅನಾವರಣಗೊಳ್ಳಬೇಕಾಗಿದೆ.

LEAVE A REPLY

Please enter your comment!
Please enter your name here