ತಾಲೂಕು ಮಟ್ಟದ ತ್ರೋಬಾಲ್‌ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಪುತ್ತೂರು ತಾಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್‌ ಪಂದ್ಯಾಟ ನಡೆಯಿತು.

ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೌಶಿಕ್‌, ಚರಣ್‌ ಎ.ವಿ, ಮಾದೇಶ ಆರ್‌, ಶ್ರೀರಾಮ ಎ, ದಿಲನ್‌ ಕೆ.ಎಂ ಹಾಗೂ ದ್ವಿತೀಯ ಪಿಯುಸಿಯ ಗಗನ್‌. ಬಿ, ಪ್ರಜ್ವಲ್‌, ಪ್ರಜ್ವಲ್‌, ಶಮಿತ್‌ ಪ್ರಸಾದ್‌. ಪಿ, ರೋಶಿತ್‌. ಆರ್‌, ಭಾರ್ಗವ್‌. ಎಸ್‌, ಸಿ. ಎಸ್.‌ ಸುಚಿತ್‌, ‌ ಮತ್ತು ಕರಣ್‌. ಬಿ.ಎಸ್ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here