ಸೆ.16: ಆಲಂಕಾರಿನಲ್ಲಿ ಲಕ್ಷ್ಮೀರಾಮ/ಜಿ.ಎಲ್.ಕಾಂಪ್ಲೆಕ್ಸ್ ಶುಭಾರಂಭ

0


ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಲಕ್ಷ್ಮೀರಾಮ ಕಾಂಪ್ಲೆಕ್ಸ್ ಮತ್ತು ಜಿ.ಎಲ್.ಕಾಂಪ್ಲೆಕ್ಸ್ ಸೆ.16ರಂದು ಬೆಳಿಗ್ಗೆ 10.30ಕ್ಕೆ ಶುಭಾರಂಭಗೊಳ್ಳಲಿದೆ.


ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಆಲಂಕಾರು ಗ್ರಾ.ಪಂ.ಅಧ್ಯಕ್ಷೆ ಸುಶೀಲ, ಪಿಡಿಒ ಸುಜಾತ ಕೆ., ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ ಅಧ್ಯಕ್ಷ ಚಿದಾನಂದ ಬೈಲಾಡಿ, ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಸುರೇಶ್ ಬೈಲು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರಾಮಣ್ಣ ಗೌಡ ಹಾಗೂ ಲಕ್ಷ್ಮೀ ಪಿ.ದೋಳ ನೆಕ್ಕರೆ ಮತ್ತು ಗೋಪಣ್ಣ ಗೌಡ ಹಾಗೂ ಲೀಲಾವತಿ ಕೊರಂಬಾಡಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here