ಆರ್ಯಾಪು ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಸದಸ್ಯತ್ವ ಅಭಿಯಾನ

0

ಪುತ್ತೂರು: ಬಿಜೆಪಿ ಪಕ್ಷದ ಆರ್ಯಾಪು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಬೆಟ್ಟಂಪಾಡಿ, ಪಾಣಾಜೆ ಹಾಗೂ ಕಬಕ ಗ್ರಾಮಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಸಭೆಯು ಸೆ.15ರಂದು ನಡೆಯಿತು. ಪಾಣಾಜೆ ಶಕ್ತಿಕೇಂದ್ರ ಸದಸ್ಯತ್ವ ಅಭಿಯಾನವು ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣ, ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣ ಹಾಗೂ ಕಬಕ ಶಕ್ತಿ ಕೇಂದ್ರ ಸದಸ್ಯತ್ವ ಅಭಿಯಾನವು ಮುರ ಗೌಡ ಸಮುದಾಯ ಭವನದಲ್ಲಿ ನಡೆಯಿತು.


ಆರ್ಯಾಪು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ ಬಿ.ಎಸ್ ಸದಸ್ಯತ್ವ ಅಭಿಯಾನದ ಬಗ್ಗೆ ವಿವರಿಸಿದರು. ಕಾರ್ಯದರ್ಶಿ ನಾಗೇಶ್ ಟಿ.ಎಸ್., ಯುವ ಮೋರ್ಛಾದ ಜಿಲ್ಲಾ ಕಾರ್ಯದರ್ಶಿ ವಿರೂಪಾಕ್ಷ ಭಟ್ ಹಾಗೂ ಕುಮಾರ ನರಸಿಂಹ ಭಟ್ ಸದಸ್ಯತ್ವ ಅಭಿಯಾನವನ್ನು ನಡೆಸಿಕೊಟ್ಟರು.


ಪಾಣಾಜೆಯಲ್ಲಿ ನಡೆದ ಅಭಿಯಾನದಲ್ಲಿ ದ.ಕ ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರ್, ಸದಾಶಿವ ರೈ ಸೂರಂಬೈಲು, ಪಾಣಾಜೆ ಗ್ರಾ.ಪಂ ಉಪಾಧ್ಯಕ್ಷೆ ಜಯಶ್ರೀ, ಸದಸ್ಯ ಸುಭಾಸ್, ರವೀಂದ್ರ ಬೈಕ್ರೋಡು, ನ್ಯಾಯವಾದಿ ಕೃಪಾಶಂಕರ್, ಪಾಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ, ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅಭಿಯಾನದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂದೀಪ್ ರೈ ಬಾಜುವಳ್ಳಿ, ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಕೊಮ್ಮಂಡ, ತಾ.ಪಂ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ, ಬೆಟ್ಟಂಪಾಡಿ ಗ್ರಾ.ಪಂ ಉಪಾಧ್ಯಕ್ಷ ಮಹೇಶ್ ಕೋರ್ಮಂಡ, ಸದಸ್ಯರಾದ ವಿನೋದ್ ಕುಮಾರ್ ರೈ ಗುತ್ತು, ಪಾರ್ವತಿ ಲಿಂಗಪ್ಪ ಗೌಡ, ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸೇಸಪ್ಪ ರೈ ಮೂರ್ಕಾಜೆ, ಸುಜಿತ್ ಕಜೆ, ಪ್ರಭಾಕರ ರೈ ಬಾಜುವಳ್ಳಿ, ಸೂರ್ಯನಾರಾಯಣ ಭಟ್ ಪಾರ, ಸತೀಶ್ ರೈ ಮೂರ್ಕಾಜೆ, ಯತೀಶ್ ಮಿತ್ತಡ್ಕ, ಮುರ ಗೌಡ ಸಮುದಾಯ ಭವನದಲ್ಲಿ ನಡೆದ ಕಬಕ ಶಕ್ತಿ ಕೇಂದ್ರ ಸದಸ್ಯತ್ವ ಅಭಿಯಾನದಲ್ಲಿ ಕಬಕ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯ ಕುಮಾರ್ ಕಲ್ಲೇಗ, ತಾ.ಪಂ ಮಾಜಿ ಸದಸ್ಯೆ ದಿವ್ಯಾ ಪುರುಷೋತ್ತಮ, ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯ ಪುರುಷೋತ್ತಮ ಮುಂಗ್ಲಿಮನೆ, ಜಯರಾಮ ನೆಕ್ಕರೆ, ವಸಂತ ನೆಕ್ಕರೆ, ಮೋಹನ್ ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here