ಕಾಂಚನ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದ ಜಂಪ್‌ರೋಪ್ ಸ್ಪರ್ಧೆ

0

ಉಪ್ಪಿನಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದ ಜಂಪ್‌ರೋಪ್ ಸ್ಪರ್ಧೆ ನಡೆಯಿತು.


ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಕಾರ್ಯಕ್ರಮ ಉದ್ಘಾಟಿಸಿ ಮತನಾಡಿ, ಜಂಪ್‌ರೋಪ್ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಅತಿಥಿಗಳಾಗಿದ್ದ ಎಡಪದವು ಎಸ್‌ಡಿಎಂ ಸ್ವಾಮಿ ವಿವೇಕಾನಂದ ಪ.ಪೂ.ಕಾಲೇಜು ನಿರ್ದೇಶಕ ಪ್ರೇಮನಾಥ್, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಶುಭ ಹಾರೈಸಿದರು.


ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್‌ನ ಕಾರ್ಯದರ್ಶಿ, ಎಸ್‌ಡಿಎಂ ಪದವಿ ಕಾಲೇಜ್‌ನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ದಾನಿಗಳಾದ ಶಂಕರನಾರಾಯಣ ನಾಯಕ್, ಯಾದವ ನೆಕ್ಕರೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ನಯನ, ಕಾಂಚನ ವಿಕ್ರಂ ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ, ಕಾಂಚನ ಪ್ರಾಥಮಿಕ ಶಾಲೆಯ ಮುಖ್ಯಗುರು ಲಕ್ಷ್ಮಣ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯಗುರು ರಮೇಶ್ ಮಯ್ಯ ಸ್ವಾಗತಿಸಿದರು. ಶಿಕ್ಷಕಿ ಸುಜಾತ ವಂದಿಸಿದರು. ಶಿಕ್ಷಕಿ ವಿಜಯಲಕ್ಷ್ಮಿ ಕಾರಂತ್ ಪಿ., ಕಾರ್ಯಕ್ರಮ ನಿರೂಪಿಸಿದರು.

388 ವಿದ್ಯಾರ್ಥಿಗಳು ಭಾಗಿ:
ಜಿಲ್ಲೆಯ ಆರು ತಾಲೂಕಿನ 48 ಪ್ರೌಢಶಾಲೆ, 42 ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪುತ್ತೂರು ತಾಲೂಕಿನ 38, ಬೆಳ್ತಂಗಡಿ ತಾಲೂಕಿನ 10, ಮೂಡಬಿದ್ರೆ ತಾಲೂಕಿನ 95, ಬಂಟ್ವಾಳ ತಾಲೂಕಿನ 86, ಮಂಗಳೂರು ಉತ್ತರ ತಾಲೂಕಿನ 84, ಮಂಗಳೂರು ತಾಲೂಕಿನ 72, ಸುಳ್ಯ ತಾಲೂಕಿನ ಮೂರು ವಿದ್ಯಾರ್ಥಿಗಳು ಸೇರಿ ಒಟ್ಟು 388 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 52 ಶಿಕ್ಷಕ ವ್ಯವಸ್ಥಾಪಕರೂ ಭಾಗಿಯಾಗಿದ್ದರು. ವಲಯ ನೋಡಲ್ ಅಧಿಕಾರಿ ಗಂಗಾಧರ, ಕುಶಾಲಪ್ಪ, ಎಸ್‌ಡಿಎಂ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರು ತೀರ್ಪುಗಾರರಾಗಿ ಸಹಕರಿಸಿದರು.

LEAVE A REPLY

Please enter your comment!
Please enter your name here