ಬೆಳ್ಳಿಪ್ಪಾಡಿಯಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಸೃಜನಶೀಲ ಕಾರ್ಯಕ್ರಮ

0

ಪುತ್ತೂರು: ಪುತ್ತೂರಿನ ಬೆಳ್ಳಿಪ್ಪಾಡಿಯಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಮಲ್ಲಿಗೆ ಗಿಡ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯೆ ಪ್ರೇಮ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕಿನ ಯೋಜನಾಧಿಕಾರಿ ಶಶಿಧರ್ ಜ್ಞಾನವಿಕಾಸ ಕಾರ್ಯಕ್ರಮದ ಉದ್ದೇಶ, ಬೆಳವಣಿಗೆ ಸದಸ್ಯರಲ್ಲಿ ಅದ ಬದಲಾವಣೆ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿ ಮೋನಪ್ಪ ಪೂಜಾರಿ ಇವರು ಗಿಡ ನೆಡುವ ಬಗ್ಗೆ, ಕೀಟನಾಶಕದ ಬಗ್ಗೆ, ಗಿಡಗಳ ಆರೈಕೆ ಬಗ್ಗೆ, ಮುಂತಾದ ವಿಚಾರಗಳ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವಲಯಧ್ಯಕ್ಷ ರಾಮಣ್ಣ ಗುಂಡೋಲೆ, ಮೇಲ್ವಿಚಾರಕಿ ಸುನೀತಾ ಶೆಟ್ಟಿ, ಉಪಾಧ್ಯಕ್ಷೆ ರೇವತಿ, ಪ್ರಗತಿ ಬಂದು ಸಂಘದ ಸದಸ್ಯರಾದ ಗಂಗಾಧರ್, ಜ್ಞಾನವಿಕಾಸ ಸಮನ್ವಧಿಕಾರಿ, ಸೇವಾಪ್ರತಿನಿಧಿಗಳು, ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here