ಉಪ್ಪಿನಂಗಡಿ: ಮೋದಿಯವರಿಗಾಗಿ ಪ್ರಾರ್ಥನೆ

0

ಉಪ್ಪಿನಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿಯ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರ ಹಾಗೂ ಉಪ್ಪಿನಂಗಡಿ ಶಕ್ತಿ ಕೇಂದ್ರದ ವತಿಯಿಂದ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮೋದಿಯವರಿಗೆ ಇನ್ನಷ್ಟು ದೇಶ ಸೇವೆ ಸಲ್ಲಿಸುವ ಶಕ್ತಿ ನೀಡಲಿ ಹಾಗೂ ಉತ್ತಮ ಆರೋಗ್ಯ ಭಾಗ್ಯ ಕರುಣಿಸಲಿ ಎಂದು ಬೇಡಿಕೊಳ್ಳಲಾಯಿತು.


ಈ ಸಂದರ್ಭ ಬಿಜೆಪಿಯ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಅತ್ರೆಮಜಲು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡು, ವಿದ್ಯಾಧರ ಜೈನ್, ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ಮುಕುಂದ ಗೌಡ ಬಜತ್ತೂರು, ಉಪ್ಪಿನಂಗಡಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸಾದ್ ಬಂಡಾರಿ, ಬಿಜೆಪಿ ಯುವ ಮೋರ್ಚಾದ ಮಂಡಲ ಉಪಾಧ್ಯಕ್ಷರಾದ ಚಿದಾನಂದ ಪಂಚೇರು, ರಾಜೇಶ್ ಕೊಡಂಗೆ, ಪ್ರಮುಖರಾದ ಚಂದಪ್ಪ ಮೂಲ್ಯ, ಜಯಂತ ಪೊರೋಳಿ, ಉಮೇಶ್ ಶೆಣೈ, ಧನಂಜಯ ನಟ್ಟಿಬೈಲು, ಉಷಾ ಮುಳಿಯ, ವನಿತಾ ಆರ್ತಿಲ, ವಿಶ್ವನಾಥ ಶೆಟ್ಟಿ ಕಂಗ್ವೆ, ಲೊಕೇಶ ಬೆತ್ತೋಡಿ, ಗೋಪಾಲ ಬೆತ್ತೋಡಿ, ಲೊಕೇಶ್ ಜೈನ್ ಸದಾನಂದ ನೆಕ್ಕಿಲಾಡಿ, ಜನಾರ್ದನ ಮರಿಕೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here