ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ-ನಿಡ್ಪಳ್ಳಿ ದೇವಾಲಯದಲ್ಲಿ ವಿಶೇಷ ಪೂಜೆ ಪ್ರಾರ್ಥನೆ

0

ನಿಡ್ಪಳ್ಳಿ; ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಜನ್ಮ ದಿನಾಚರಣೆ ಅಂಗವಾಗಿ ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮೋದಿಯವರ ಆರೋಗ್ಯ, ಆಯುಷ್ಯ ವೃದ್ದಿಗಾಗಿ, ರಕ್ಷಣೆಗಾಗಿ ಮತ್ತು ಅವರ ಆಡಳಿತದಲ್ಲಿ ದೇಶದ ಅಭಿವೃದ್ಧಿ, ಶಾಂತಿ, ವಿಶ್ವಾಸ, ಸೌಹಾರ್ದತೆಯಿಂದ ಕೂಡಿರಲಿ ಎಂದು ಅರ್ಚಕ ನವೀನ್ ಹೆಬ್ಬಾರ್ ಪ್ರಾರ್ಥನೆ ಸಲ್ಲಿಸಿದರು.ನಂತರ ಸಿಹಿ ತಿಂಡಿ ವಿತರಿಸಲಾಯಿತು.

  ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್,ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅರ್.ಸಿ.ನಾರಾಯಣ ರೆಂಜ, ನಿಡ್ಪಳ್ಳಿ ಬಿ.ಜೆ.ಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಸಂತೋಷ್ ಕುಮಾರ್.ಬಿ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ, ಕಾರ್ಯದರ್ಶಿ ಕುಮಾರ ನರಸಿಂಹ ಭಟ್ ಹಾಗೂ ಬಿ.ಜೆ.ಪಿ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here