ತಿಂಗಳಾಡಿ: ಚರಂಡಿಗೆ ಉರುಳಿ ಬಿದ್ದ ಕಾರು-ಚಾಲಕ ಪಾರು

0

ಪುತ್ತೂರು:ಓಮ್ನಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ನಡೆದಿದೆ.ಓಮ್ನಿಯು ತಿಂಗಳಾಡಿಯಿಂದ ರೆಂಜಲಾಡಿಗೆ ತೆರಳುವ ಸಂದರ್ಭ ಸರಿ ಸುಮಾರು ಬೆಳಗಿನ ಜಾವ 7.30ರ ವೇಳೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿರಿವುದೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ.

ನಿದ್ದೆ ಮಂಪರು ಆವರಿಸಿದ್ದರಿಂದ ವಾಹನ ಹತೋಟಿ ಕಳೆದುಕೊಂಡು ರಸ್ತೆಯಿಂದ 1 ಮೀಟರ್ ದೂರದಲ್ಲಿದ ಚರಂಡಿಗೆ ಉರುಳಿದೆ. ವಾಹನ ಉರುಳಿಬಿದ್ದ ಸಮೀಪದಲ್ಲಿ ವಿದ್ಯುತ್ ಕಂಬವಿತ್ತು. ಅದಕ್ಕೆ ಢಿಕ್ಕಿ ಹೊಡೆಯುತ್ತಿದ್ದರೇ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.ಓಮ್ನಿ ಚಾಲಕ ರೆಂಜಲಾಡಿ ನಿವಾಸಿ ರಫೀಕ್ ಎಂಬವರು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here