ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಪುತ್ತೂರು ಶಾಖೆಗೆ ಅತ್ಯುತ್ತಮ ಶಾಖಾ ಪ್ರಶಸ್ತಿ

0

ಪುತ್ತೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 30ನೇ ವಾರ್ಷಿಕ ಸಭೆಯು ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ ರೈಯವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಉರ್ವ ಸೆಂಟಿನರಿ ಚರ್ಚ್ ಹಾಲ್ ನಲ್ಲಿ ಸೆ.1ರಂದು ನಡೆಯಿತು.

ಈ ಸಭೆಯಲ್ಲಿ 2023-24ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಶಾಖೆಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.30ಕೋಟಿ ಅಧಿಕ ವ್ಯವಹಾರ ವಿಭಾಗದಲ್ಲಿ ಪುತ್ತೂರು ಶಾಖೆಯು ಪ್ರಥಮ ಸ್ಥಾನ ಪಡೆದಿರುತ್ತದೆ. ಅಧ್ಯಕ್ಷ ಕೆ ಜೈರಾಜ್ ಬಿ ರೈ ಪ್ರಶಸ್ತಿ ನೀಡಿ ಗೌರವಿಸಿದರು. ಶಾಖೆಯ ಉಸ್ತುವಾರಿ ನಿರ್ದೇಶಕ ಹಾಗೂ ಸಂಘದ ನಿರ್ದೇಶಕ ಕೆ ಸೀತಾರಾಮ ರೈ, ಸವಣೂರು, ಶಾಖೆಯ ಶಾಖಾ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸಂಘದ ನಿರ್ದೇಶಕ ಎ ಚಿಕ್ಕಪ್ಪ ನಾಯ್ಕ್ ಹಾಗೂ ಶಾಖಾ ವ್ಯವಸ್ಥಾಪಕ ಚಂದ್ರಹಾಸ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here