ಸೆ.21:ಅಕ್ಷಯ ಕಾಲೇಜಿನಲ್ಲಿ ಓಣಂ ಹಬ್ಬ ಆಚರಣೆ

0

ಪುತ್ತೂರು:ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಸೆ.21 ರಂದು ಓಣಂ ಹಬ್ಬ ಆಚರಣೆಯನ್ನು ಆಚರಿಸಲಾಗುತ್ತದೆ.

ಡಾ.ಪ್ರದೀಪ್ ಕುಮಾರ್ಸ್ ಹಾಸ್ಪಿಟಲ್ ಆಫ್ ಆಯುರ್ವೇದ ಇದರ ನಿರ್ದೇಶಕ ಹಾಗೂ ಮುಖ್ಯ ಫಿಶಿಸಿಯನ್ ಡಾ.ಪ್ರದೀಪ್ ಕುಮಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಚೇರ್ಮನ್ ಜಯಂತ್ ನಡುಬೈಲುರವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬದಿಯಡ್ಕ ಉಪ್ಲೇರಿ ಮಂತ್ರ ಮೂರ್ತಿ ಗುಳಿಗ ಸನ್ನಿಧಿಯ ಪ್ರಧಾನ ಕರ್ಮಿ ಗೋಪಾಲಕೃಷ್ಣ ಕುಲಾಲ್ ವಂತಿಚ್ಚಾಲ್, ಗೌರವ ಅತಿಥಿಯಾಗಿ ತುಳುರಂಗ ಭೂಮಿ ನಟ ಸುಂದರ್ ರೈ ಮಂದಾರರವರು ಭಾಗವಹಿಸಲಿದ್ದಾರೆ ಎಂದು ‌ಕಾಲೇಜಿನ ಪ್ರಾಂಶುಪಾಲ ಸಂಪತ್ ಪಿ.ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here