ರೆಂಜಲಾಡಿ ಯಂಗ್‌ಮೆನ್ಸ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

0

ಅಧ್ಯಕ್ಷರಾಗಿ ರಝಾಕ್ ಬಿ.ಜಿ, ಪ್ರ.ಕಾರ್ಯದರ್ಶಿ ಝಕರಿಯಾ ರೆಂಜಲಾಡಿ ಆಯ್ಕೆ

ಪುತ್ತೂರು: ಖಿದ್ಮತುದ್ದೀನ್ ಯಂಗ್‌ಮೆನ್ಸ್ ಅಸೋಸಿಯೇಶನ್(ಕೆವೈಎಂಎ) ರೆಂಜಲಾಡಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ರಝಾಕ್ ಬಿ.ಜಿ ಹಾಗೂ ಪ್ರ.ಕಾರ್ಯದರ್ಶಿಯಾಗಿ ಝಕರಿಯಾ ರೆಂಜಲಾಡಿ ಆಯ್ಕೆಯಾಗಿದ್ದಾರೆ.


ಕೋಶಾಧಿಕಾರಿಯಾಗಿ ಆಸಿಫ್ ರೆಂಜಲಾಡಿ, ಉಪಾಧ್ಯಕ್ಷರಾಗಿ ಇಮ್ರಾನ್ ರೆಂಜಲಾಡಿ, ಜೊತೆ ಕಾರ್ಯದರ್ಶಿಯಾಗಿ ರಫೀಕ್ ಪರಾಡ್ ಆಯ್ಕೆಯಾಗಿದ್ದಾರೆ. ಅಲ್ಲದೇ 16 ಮಂದಿ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.

ರೆಂಜಲಾಡಿ ಮಸೀದಿಯ ಖತೀಬ್ ಅಬ್ದುಲ್ ನಾಸಿರ್ ಫೈಝಿ ದುವಾ ನೆರವೇರಿಸಿದರು. ಆರ್.ಐ.ಸಿ ಅಧ್ಯಕ್ಷ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ಸಲಹೆ ಸೂಚನೆಗಳನ್ನು ನೀಡಿದರು. ರೆಂಜಲಾಡಿ ಮಸೀದಿಯ ಅಧ್ಯಕ್ಷ ಆರ್.ಎಂ ಅಲಿ ಹಾಜಿ, ಪ್ರ.ಕಾರ್ಯದರ್ಶಿ ಝೈನುದ್ದೀನ್ ಹಾಜಿ ಜೆ.ಎಸ್, ಆದರ್ಶ ಸೇವಾ ಸಂಘದ ಅಧ್ಯಕ್ಷ ಇಮ್ರಾನ್ ಮಲ್ನಾಡ್, ರೆಂಜಲಾಡಿ ಮಸೀದಿಯ ಸದರ್ ಉಸ್ತಾದ್ ಅಬೂಬಕ್ಕರ್ ಮುಸ್ಲಿಯಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯಂಗ್‌ಮೆನ್ಸ್ ನಿರ್ಗಮನ ಅಧ್ಯಕ್ಷ ಯೂಸುಫ್ ರೆಂಜಲಾಡಿ ಸ್ವಾಗತಿಸಿ ಪ್ರಸ್ತಾವನೆಗೈದರು. ನಿರ್ಗಮನ ಪ್ರ.ಕಾರ್ಯದರ್ಶಿ ಹಾರಿಸ್ ಕೂಡುರಸ್ತೆ ವರದಿ ಲೆಕ್ಕಪತ್ರ ಮಂಡಿಸಿದರು. ನೂತನ ಕಟ್ಟಡ ಸಮಿತಿ ಅಧ್ಯಕ್ಷ ಬಾತಿಷ ಪರಾಡ್ ಕಟ್ಟಡ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಜಾಬಿರ್ ಸುಲ್ತಾನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here