ಕನ್ಯಾನ: ತಮ್ಮನ ಕೊಲೆ: ಆರೋಪಿ ಅಣ್ಣನಿಗೆ ಜೀವಾವಧಿ ಶಿಕ್ಷೆ – 50 ಸಾವಿರ ರೂ. ದಂಡ

0

ವಿಟ್ಲ: ತಮ್ಮನನ್ನು ಕೊಲೆಗೈದ ಆರೋಪಿ ಅಣ್ಣನಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಐತ್ತಪ್ಪ ನಾಯ್ಕ ಎಂಬವರು ಜೀವಾವಧಿ ಶಿಕ್ಷೆಗೊಳಗಾದ ಆರೋಪಿ.

2022 ಮೇ.10 ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಬಾಳಪ್ಪ ನಾಯ್ಕ ಹಾಗೂ ಐತ್ತಪ್ಪ ನಾಯ್ಕ ಸಹೋದರರ ಮಧ್ಯೆ ಯಾವುದೋ ವಿಷಯದಿಂದ ಮಾತಿಗೆ ಮಾತು ಬೆಳೆದು ಐತ್ತಪ್ಪ ನಾಯ್ಕ ಅವರು ತಮ್ಮ ಬಾಳಪ್ಪ ನಾಯ್ಕ ಅವರನ್ನು ಮರದ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ನಾಗರಾಜ್ ಹೆಚ್. ಇ.ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸೆ.20 ರಂದು ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಽಶರಾದ ಸುನೀತಾ ಎಸ್.ಜಿ.ಅವರು ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ರೂ.50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರಿ ಅಭಿಯೋಜಕರಾದ ಹರಿಶ್ಚಂದ್ರ ಉದ್ಯಾವರ ಅವರು ಸರಕಾರದ ಪರ ವಾದ ಮಂಡಿಸಿದ್ದರು. ಎಚ್.ಸಿ. ಜಯರಾಮ್ ಅವರು ತನಿಖಾ ಸಹಾಯಕನಾಗಿ ಕರ್ತವ್ಯ ಮಾಡಿದ್ದರು.

LEAVE A REPLY

Please enter your comment!
Please enter your name here