ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ್ ಆ.ಮಾ ಶಾಲೆಯಲ್ಲಿ ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನೆ

0

ಪುತ್ತೂರು: ಸ್ಯಾಂತೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆ ರೆಂಜಿಲಾಡಿಯಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ ಸೆ.21ರಂದು ನಡೆಯಿತು.

ಮುಖ್ಯ ಅತಿಥಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಭಾರತ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧನೆ ಅನ್ನುವ ಬೀಜ ಯಾರ ಬಳಿಯಾದರೂ ಮೊಳಕೆ ಒಡೆಯಲು ಸಾಧ್ಯ. ಶ್ರಮ ಪಟ್ಟರೆ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬ ಮಾತುಗಳ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ರೆ.ಫಾ. ಪೌಲ್ ಜೇಕಬ್, ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಸೈಮನ್ ಕೆ ಸಿ ,ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಯೆಸ್.ಕೆ, ಗೈಡ್ ಶಿಕ್ಷಕಿ ಪ್ರಿಯಾ.ಏ ,ಸ್ಕೌಟ್ ಮಾಸ್ಟರ್ ವಿಶ್ವತ್ ಪಿ, ಶಾಲಾ ಶಿಕ್ಷಕರು, ಶಿಕ್ಷಕೇತರ ವರ್ಗ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಸಹ ಶಿಕ್ಷಕಿ ಅಕ್ಷತಾ ಕೆ ಸ್ವಾಗತಿಸಿ, ಸಹ ಶಿಕ್ಷಕಿ ಸಂಗೀತ ವಂದಿಸಿ ,ಸಹ ಶಿಕ್ಷಕಿ ಪ್ರಭಾವತಿ ನಿರೂಪಿಸಿದರು.

LEAVE A REPLY

Please enter your comment!
Please enter your name here