ಸೆ.23ರಂದು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯಿಲ್ಲ..!

0

ಪುತ್ತೂರು: ಸೆ.23ರಂದು ಪೌರ ಕಾರ್ಮಿಕ ದಿನಾಚರಣೆಯನ್ನು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಅಂದು ಘನತ್ಯಾಜ್ಯ ಸಂಗ್ರಹಣೆ ಮತ್ತು ನಗರ ನೈರ್ಮಲ್ಯ ಕಾರ್ಯ ಇರುವುದಿಲ್ಲ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.


ರಾಜ್ಯಾದ್ಯಂತ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕ ದಿನ ಆಚರಣೆ ಮಾಡಲು ಕರ್ನಾಟಕ ಸರಕಾರ ಘೋಷಣೆ ಮಾಡಿದಂತೆ ಅಂದು ಪುತ್ತೂರು ಪುರಭವನದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಣೆ ಮಾಡಲು ನಿರ್ಧರಿಸಲಾಗಿದೆ. ಆದುದರಿಂದ ಆ ದಿನದಂದು ಘನ ತ್ಯಾಜ್ಯ ಸಂಗ್ರಹಣೆ, ನಗರ ನೈರ್ಮಲ್ಯ ಕಾರ್ಯ ಇರುವುದಿಲ್ಲ. ಎಲ್ಲಾ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ ಎಂದು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here