ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ನಗರ ನೆಲ್ಯಾಡಿ ಇಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು.

ಪ್ರಗತಿಪರ ಕೃಷಿಕ ಪ್ರಸನ್ನ ಹೊಸವಕ್ಲು ಹಾಗೂ ಅರಸಿನಮಕ್ಕಿ ಪ.ಪೂ.ಕಾಲೇಜಿನ ಅತಿಥಿ ಉಪನ್ಯಾಸಕಿ ನಿವೇದಿತ ದಂಪತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅತಿಥಿ ಉಪನ್ಯಾಸಕಿ ನಿವೇದಿತಾ ಅವರು ಓಣಂ ಹಬ್ಬದ ಆಚರಣೆಯ ಮಹತ್ವ ಹಾಗೂ ಅದರ ಹಿನ್ನೆಲೆಯನ್ನು ತಿಳಿಸಿ ಶುಭ ಹಾರೈಸಿದರು. ಶಿಶು ಮಂದಿರದ ಪೋಷಕಿ ಪ್ರಿಯಾಂಕ, ಶಾಲಾ ಮುಖ್ಯ ಶ್ರೀಮಾನ್ ಗಣೇಶ್ ವಾಗ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಪೂಕಳವನ್ನು ಹಾಕಲಾಯಿತು.
ಇದೇ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿಗಳ ಸಾಮೂಹಿಕ ಹುಟ್ಟುಹಬ್ಬ ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಭಾಗೀರಥಿ ಮಾತಾಜಿ ಸ್ವಾಗತಿಸಿದರು. ಶುಭರಾಣಿ ಮಾತಾಜಿ ವಂದಿಸಿದರು. ಮಮತಾ ಮಾತಾಜಿ ನಿರೂಪಿಸಿದರು. ಮಧ್ಯಾಹ್ನ ಬಾಳೆ ಎಲೆಯ (ಓಣಂಖಾದ್ಯ )ಔತಣವನ್ನು ಏರ್ಪಡಿಸಲಾಯಿತು. ಶಾಲಾ ಶಿಕ್ಷಕರು, ಶಿಕ್ಷಕೇತರರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಊರವರು ಕಾರ್ಯಕ್ರಮದಲ್ಲಿ ಭಾಗಿಯಾದರು.