ಪುತ್ತೂರು ತಾಲ್ಲೂಕು ಮಹಿಳಾ ಬಂಟರ ಸಂಘದ ಮಾಸಿಕ ಸಭೆ- ವಿದ್ಯಾರ್ಥಿಗಳಿಗೆ ಸಹಾಯ ಧನ ವಿತರಣೆ

0

ಪುತ್ತೂರು : ಪುತ್ತೂರು ಬಂಟರ ಭವನದಲ್ಲಿ ತಾಲೂಕು ಮಹಿಳಾ ಬಂಟರ ಸಂಘದ ಮಾಸಿಕ ಸಭೆ ಸೆ. 10 ರಂದು ಜರಗಿತು. ಕುತ್ಯಾಡಿ ಸತೀಶ್ ರೈ ತನ್ನ ಸಹೋದರಿ ಸ್ವರ್ಣಲತಾ ಜೆ ರೈ ಇವರ ಮೂಲಕ ಮಹಿಳಾ ಬಂಟರ ವಿಭಾಗ ಇದರ ನೇತೃತ್ವದಲ್ಲಿ 5 ಜನ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಕಳೆದ 6ವರ್ಷಗಳಿಂದ ನೀಡುತ್ತಿದ್ದು, ಈ ವರ್ಷ ಸದ್ರಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ವೆಚ್ಚದ ಮೊಬಲಗನ್ನು ಮಹಿಳಾ ಬಂಟರ ಮಾಸಿಕ ಸಭೆಯಲ್ಲಿ ವಿತರಿಸಲಾಯಿತು.


ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಹೇಮಾನಾಥ ಶೆಟ್ಟಿ ಕಾವು, ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ಗೀತಾ ಮೋಹನ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕರಾದ ವಾಣಿ ಯಸ್ ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಹರಿಣಕ್ಷಿ ಜೆ ಶೆಟ್ಟಿ, ಸಂಘದ ಪದಾಧಿಕಾರಿ ಜಯಂತಿ ಯಂ ರೈ ಉಪಸ್ಥಿತರಿದ್ದರು. ಭವ್ಯ ಅಮ್ಮಣ್ಣ ರೈ ಪ್ರಾರ್ಥಿಸಿದರು, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ ಶೆಟ್ಟಿ ವರದಿ ವಾಚಿಸಿದರು ಕೋಶಾಧಿಕಾರಿ ಅರುಣಾ ಡಿ ರೈ ಆಟಿದ ಕೂಟ ಕಾರ್ಯಕ್ರಮದ ಖರ್ಚು ವೆಚ್ಚದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕಾರಿ ಸಮಿತಿಯ ಅನ್ನಪೂರ್ಣಿಮಾ ರೈ ಕುತ್ಯಾಡಿ , ಅನುರಾಧ ಆರ್ ಶೆಟ್ಟಿ. ಕೃಷ್ಣವೇಣಿ ಕೆ ರೈ ಸಲಹೆ ಸೂಚನೆ ನೀಡಿದರು. ಅಧ್ಯಕ್ಷೆ ಗೀತಾ ಮೋಹನ ರೈ ಸ್ವಾಗತಿಸಿ, ಕೋಶಾಧಿಕಾರಿ ಅರುಣಾ ಡಿ ರೈ ವಂದಿಸಿದರು.

LEAVE A REPLY

Please enter your comment!
Please enter your name here