ಪುತ್ತೂರು ಪಿಎಲ್‌ಡಿ ಬ್ಯಾಂಕ್‌ ವತಿಯಿಂದ ರಾಜಶೇಖರ್ ಜೈನ್ ರವರಿಗೆ ಸನ್ಮಾನ

0

ಪುತ್ತೂರು: ರಾಷ್ಟ್ರ ಮಟ್ಟದ ಸಂಸ್ಥೆಯಾದ ನ್ಯಾಶನಲ್ ಫಿಲ್ಮ್ ಆಂಡ್ ಫೈನ್ ಆರ್ಟ್ಸ್ ಕೋ ಅಪರೇಟಿವ್ ಲಿಮಿಟೆಡ್ ನವದೆಹಲಿ ಇದರ ನಿರ್ದೇಶಕರಾಗಿ ಆಯ್ಕೆಯಾದ ಪುತ್ತೂರು ಪಿಎಲ್‌ಡಿ ಬ್ಯಾಂಕಿನ ನಿರ್ದೇಶಕ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ನ ಜಿಲ್ಲಾ ನಿರ್ದೇಶಕ ರಾಜಶೇಖರ್ ಜೈನ್‌ರವರನ್ನು ಪುತ್ತೂರು ಪಿಎಲ್‌ ಡಿ ಬ್ಯಾಂಕಿನ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಬ್ಯಾಂಕಿನ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ಉಪಾಧ್ಯಕ್ಷೆ ಸುಜಾತ ರಂಜನ್ ರೈ, ಕೋಶಾಧಿಕಾರಿ ನಾರಾಯಣ ಪೂಜಾರಿ ಕುರಿಕ್ಕಾರ, ನಿರ್ದೇಶಕರುಗಳಾದ ಎ.ಬಿ.ಮನೋಹರ ರೈ, ನಾರಾಯಣ ಕನ್ಯಾನ, ಯುವರಾಜ ಪೆರಿಯತ್ತೋಡಿ, ಪ್ರವೀಣ್ ರೈ ಪಂಜೊಟ್ಟು, ದೇವಯ್ಯ ಗೌಡ, ಉಮೇಶ್ ನಾಯಕ್ , ಧರ್ಣಪ್ಪ ಮೂಲ್ಯ, ಮೀನಾಕ್ಷಿ , ಶೀನ ನಾಯ್ಕ ಹಾಗೂ ಬ್ಯಾಂಕಿನ ವ್ಯವಸ್ಥಾಪಕ ಶೇಖರ ಎಂ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here