ಮುಂಡೂರು ಗ್ರಾಮ ಪಂಚಾಯತ್ ವತಿಯಿಂದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ವತಿಯಿಂದ ಸರ್ವೆ ಗ್ರಾಮದ ಕಟ್ಟತ್ತಡ್ಕದಲ್ಲಿ ಗುರುತಿಸಲಾದ ಜಾಗವನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡುವ ಕಾರ್ಯ ಸೆ.26ರಂದು ನಡೆಯಿತು.


ಸುಮಾರು 24 ಫಲಾನುಭವಿಗಳಿಗೆ ಕಟ್ಟತ್ತಡ್ಕದಲ್ಲಿ ನಿವೇಶನ ಗುರುತಿಸಲಾಗಿದ್ದು ಅದನ್ನು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್‌ಎಸ್‌ಡಿ ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ತಲಾ ಎರಡು ಮುಕ್ಕಾಲು ಸೆಂಟ್ಸ್‌ನಂತೆ ಅಳತೆ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಅಶೋಕ್ ಕುಮಾರ್ ಪುತ್ತಿಲ, ಪ್ರವೀಣ್ ನಾಯ್ಕ ನೆಕ್ಕಿತ್ತಡ್ಕ, ಬಾಬು ಕಲ್ಲಗುಡ್ಡೆ, ಬಾಲಕೃಷ್ಣ ಪೂಜಾರಿ ಕುರೆಮಜಲು, ರಸಿಕಾ ರೈ ಮೇಗಿನಗುತ್ತು, ಮುಂಡೂರು ಸಿಎ ಬ್ಯಾಂಕ್ ನಿರ್ದೇಶಕ ಶಿವನಾಥ ರೈ ಮೇಗಿನಗುತ್ತು, ಗ್ರಾ.ಪಂ ಪಿಡಿಓ ಅಜಿತ್ ಜಿ.ಕೆ, ಕಾರ್ಯದರ್ಶಿ ಸೂರಪ್ಪ ಹಾಗೂ ಗ್ರಾ.ಪಂ ಸಿಬ್ಬಂದಿಗಳು, ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಆಚಾರ್ಯ ನರಿಮೊಗರು, ಗುತ್ತಿಗೆದಾರ ರಾಜ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here