ಬೆದ್ರೋಡಿ: ಲಾರಿ ಡಿಕ್ಕಿ-ಪಾದಚಾರಿಗೆ ಗಾಯ

0

ನೆಲ್ಯಾಡಿ: ಲಾರಿಯೊಂದು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಸೆ.24ರಂದು ರಾತ್ರಿ ನಡೆದಿದೆ.


ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿ ಜನಾರ್ದನ(38 ವ.)ಗಾಯಗೊಂಡವರಾಗಿದ್ದಾರೆ. ಇವರು ಬೆದ್ರೋಡಿಯಲ್ಲಿ ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟುತ್ತಿದ್ದ ವೇಳೆ ಹಾಸನದಿಂದ ಮಂಗಳೂರು ಕಡೆಗೆ ಅನೂಪ್ ಸಿಂಗ್ ಮಾಕಾಲ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಲಾರಿ(ಕೆಎ 13, ಎ 1008)ಡಿಕ್ಕಿಯಾಗಿದೆ. ಪರಿಣಾಮ ಜನಾರ್ದನ ಅವರ ಬಲಕಿವಿಗೆ, ಹಣೆಗೆ, ಎಡಕಾಲಿನ ತೊಡೆಗೆ ಗಾಯವಾಗಿದ್ದು ಅವರಿಗೆ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜನಾರ್ದನ ಅವರು ನೀಡಿದ ದೂರಿನಂತೆ ಪುತ್ತೂರು ಸಂಚಾರ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here