ಯುವವಾಹಿನಿ ಪುತ್ತೂರು ಘಟಕದಿಂದ ಮುಂಡೂರು ಶಾಲೆಗೆ ಮೇಜು ಕೊಡುಗೆ ಹಸ್ತಾಂತರ

0

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಸೆ.25ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇಲ್ಲಿಗೆ ಅತೀ ಅಗತ್ಯವುಳ್ಳ ಮೂರು ಮೇಜುಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾದ ರಮೇಶ್ ಪಜಿಮಣ್ಣು, ಮತ್ತು ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯ ಪಿ ಹಾಗೂ ಘಟಕದ ಅಧ್ಯಕ್ಷರಾದ ಜಯರಾಮ ಬಿ ಎನ್, ಕಾರ್ಯದರ್ಶಿ ಸಮಿತ್ ಪಿ ಉಪಸ್ಥಿತರಿದ್ದರು.ಶಾಲೆಯ ಪುಟಾಣಿ ಮಕ್ಕಳು ಪ್ರಾರ್ಥನೆಯನ್ನು ನೆರವೇರಿಸಿದರು. ಮುಖ್ಯೋಪಾಧ್ಯಾಯರಾದ ವಿಜಯ.ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲೆಯ ಶಿಕ್ಷಕರಾದ ಬಶೀರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ರಾಮಚಂದ್ರ ಧನ್ಯವಾದಗೈದರು. ವೇದಿಕೆಯ ಮುಂಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು. ಯುವವಾಹಿನಿ ಘಟಕದ ಉಪಾಧ್ಯಕ್ಷರಾದ ಅಣ್ಣಿ ಪೂಜಾರಿ, ಕೋಶಾಧಿಕಾರಿ ಶರತ್ ಸಾಲ್ಯಾನ್, ನಿರ್ದೇಶಕರಾದ ಮೋಹನ್ ಶಿಬರ, ರವಿ ಕುಮಾರ್ ಕಲ್ಕಾರ್,ಸತೀಶ್ ಹಿಂದಾರ್,ಬಾಲಕೃಷ್ಣ ಪೆರಿಯಡ್ಕಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here