ಕೊಕ್ಕಡ: ಜಾನುವಾರು ಕಡಿದು ಮಾಂಸ ಮಾರಾಟ-ಪೊಲೀಸ್ ದಾಳಿ-ಆರೋಪಿಗಳು ಪರಾರಿ, ಸೊತ್ತು ವಶ

0

ನೆಲ್ಯಾಡಿ: ಜಾನುವಾರು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಠಾಣೆ ಪೊಲೀಸರು ದಾಳಿ ನಡೆಸಿ ಜಾನುವಾರು ಮಾಂಸ, ಸೊತ್ತು ವಶಪಡಿಸಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ಎಂಬಲ್ಲಿ ಸೆ.26ರಂದು ಮಧ್ಯಾಹ್ನ ನಡೆದಿದೆ.


ಮಲ್ಲಿಗೆಮಜಲು ನಿವಾಸಿ ಉಸ್ಮಾನ್ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಿಶೋರ್ ಪಿ. ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದರು. ಈ ವೇಳೆ ತೋಟದ ಮಾಲಿಕ ಉಸ್ಮಾನ್ ಪರಾರಿಯಾಗಿದ್ದು, ಘಟನಾ ಸ್ಥಳದಲ್ಲಿ 10 ಕಿಲೋ ಗ್ರಾಂ ಜಾನುವಾರು ಮಾಂಸ, ಜಾನುವಾರಿನ ದೇಹದ ಇತರೇ ಭಾಗಗಳು, ಬ್ಯಾಟರಿ ಚಾಲಿತ ತೂಕದ ಯಂತ್ರ-1, ಚಾಕು ಸೇರಿದಂತೆ ಇತರೇ ಸೊತ್ತುಗಳು ಪತ್ತೆಯಾಗಿದ್ದು ಅವುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಸೊತ್ತುಗಳ ಮೌಲ್ಯ 5,250 ರೂ.ಎಂದು ಅಂದಾಜಿಸಲಾಗಿದೆ. ಆರೋಪಿತರಾದ ಉಸ್ಮಾನ್ ಮತ್ತು ಸಲೀಂ ಎಂಬವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 66/2024, ಕಲಂ: ಕಲಂ: 4,12 ಕರ್ನಾಟಕ ಗೋಹತ್ಯೆ ನಿಷೇದ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020ರಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here