ಅ.1: ಸವಣೂರು ಇಡ್ಯಾಡಿ ಪ್ರಸಾದ್ ನಿಲಯದಲ್ಲಿ ವಿಶ್ವ ಹಿರಿಯರ ದಿನಾಚರಣೆ, ವಾಸುದೇವ ಇಡ್ಯಾಡಿಯವರಿಗೆ ಸನ್ಮಾನ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸವಣೂರು ಇವರ ಆಶ್ರಯದಲ್ಲಿ ವಿಶ್ವ ಹಿರಿಯರ ದಿನಾಚರಣೆ ಮತ್ತು ನಾಟಿವೈದ್ಯ ವಾಸುದೇವ ಇಡ್ಯಾಡಿರವರಿಗೆ ಸನ್ಮಾನ ಸಮಾರಂಭ ಅ.1 ರಂದು ಬೆಳಿಗ್ಗೆ 10 ಗಂಟೆಗೆ ಸವಣೂರು ಇಡ್ಯಾಡಿ ಪ್ರಸಾದ್ ನಿಲಯದಲ್ಲಿ‌ ಜರಗಲಿದೆ. ಕಡಬ ತಾಲೂಕು ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ .ಸವಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರುರವರು ಸಾಧಕರಿಗೆ ಸನ್ಮಾನ ನೇರವೇರಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ರಾಕೇಶ್ ರೈ ಕೆಡೆಂಜಿ, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಗಿರಿಶಂಕರ ಸುಲಾಯ, ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಅಧ್ಯಕ್ಷ ಗಿರಿಶಂಕರ್ ಸುಲಾಯ, ಸವಣೂರು ಹಾಲು ಉತ್ಪಾದಕರ ಸಂಘ ದ. ಅಧ್ಯಕ್ಷ ಕೃಷ್ಣ ಭಟ್ ಕುಕ್ಕುಜೆ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಗಂಗಾಧರ ಪೆರಿಯಡ್ಕ, ಜಿಲ್ಲಾ ಯುವ ಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಪತ್ರಕರ್ತ ಉಮಾಪ್ರಸಾದ್ ರೈ ನಡುಬೈಲು, ಸವಣೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಗೌಡ ಪರಣೆರವರುಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here