ಬುರೂಜ್ ಶಾಲೆಯಲ್ಲಿ ಶಿಕ್ಷಕ -ರಕ್ಷಕ ಸಂಘದ ಸಭೆ

0

ಪುತ್ತೂರು: ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿ ಇಲ್ಲಿ 2023-24 ನೇ ಸಾಲಿನ ಶಿಕ್ಷಕ -ರಕ್ಷಕ ಸಂಘದ ಸಭೆ ನಡೆಸಲಾಯಿತು.

ಶಾಲಾ ಸಂಚಾಲಕ ಶೇಖ್ ರಹ್ಮತ್ತುಲ್ಲಾಹ್ ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಅಝೀಝ್ ವಹಿಸಿದ್ದರು. ದಾಯ್ಜಿವಲ್ಡ್ ಸಮೂಹ ಸಂಸ್ಥೆಗಳ ಅಧ್ಯಕ್ಷ ವಾಲ್ಟರ್ ನಂದಳಿಕೆ ಮಾತನಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಬೇಕಾಗಿದರೆ ನೀವು ನಿಮ್ಮ ಆಸಕ್ತಿಯಲ್ಲಿ ಮುಂದುವರಿಯಿರಿ ಎಂದರು.


ಮುಖ್ಯ ಅತಿಥಿ ಉಮೇಶ್ ಕೊಟ್ಯಾನ್ ಮಾತನಾಡಿದರು.ವೇದಿಕೆಯಲ್ಲಿ ಕರಾಟೆ ಮಾಸ್ಟರ್ ಸರ್ಫಾಝ್ , ಮುಖ್ಯ ಶಿಕ್ಷಕಿ ಜಯಶ್ರೀ ಬಿ ಸಾಲ್ಯಾನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮತ್ತು ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದವರನ್ನು ಸನ್ಮಾನಿಸಲಾಯಿತು. ಪೋಷಕರು,ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಝೀಯಾ ಎಸ್.ಪಿ ವಂದಿಸಿದರು.ಎಲ್ಸಿ ಲಸ್ರಾದೋ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here