ಕುಂಬ್ರ ವರ್ತಕರ ಸಂಘದ 20 ನೇ ವರ್ಷಾಚರಣೆ, ಪೂರ್ವಭಾವಿ ಸಭೆ

0

ಪುತ್ತೂರು: ಕುಂಬ್ರ ವರ್ತಕರ ಸಂಘಕ್ಕೆ 20 ವರ್ಷ ತುಂಬುತ್ತಿದ್ದು ಈ ಸಂದರ್ಭದಲ್ಲಿ 20 ನೇ ವರ್ಷಾಚರಣೆ ಮಾಡುವ ಬಗ್ಗೆ ವರ್ತಕರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಕುಂಬ್ರ ನಿಶ್ಮಿತಾ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು.

ಹತ್ತು ಹಲವು ಸಾಮಾಜಿಕ ಸೇವೆಗಳ ಮೂಲಕ ಹೆಸರುವಾಸಿಯಾಗಿರುವ ಕುಂಬ್ರ ವರ್ತಕರ ಸಂಘದ 20 ವರ್ಷಾಚರಣೆಯನ್ನು ಯಾವ ರೀತಿಯಾಗಿ ಆಯೋಜಿಸುವುದು ಎಂಬುದರ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲಾಯಿತು.


ಸಭೆಯಲ್ಲಿ ವರ್ತಕರ ಸಂಘದ ಗೌರವ ಸಲಹೆಗಾರ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಕುಂಬ್ರ ದುರ್ಗಾಪ್ರಸಾದ್ ರೈ ಮತ್ತು ಚಂದ್ರಕಾಂತ ಶಾಂತಿವನ , ಸಂಘದ ಸ್ಥಾಪಕಾಧ್ಯಕ್ಷ ಶ್ಯಾಮ್‌ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ನಾರಾಯಣ ಪೂಜಾರಿ ಕುರಿಕ್ಕಾರ, ಮೆಲ್ವಿನ್ ಮೊಂತೆರೋ, ಸುಂದರ ರೈ ಮಂದಾರ, ಎಸ್.ಮಾಧವ ರೈ ಕುಂಬ್ರ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ಕೋಶಾಧಿಕಾರಿ ಸಂಶುದ್ದೀನ್ ಎ.ಆರ್ ಸ್ವಾಗತಿಸಿ, ಕಾರ್ಯದರ್ಶಿ ಭವ್ಯ ರೈ ವಂದಿಸಿದರು.

LEAVE A REPLY

Please enter your comment!
Please enter your name here