ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ)ಪುತ್ತೂರು ಇದರ 101ನೇ ಮಹಾಸಭೆ

0

ಪುತ್ತೂರು: ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ)ಪುತ್ತೂರು ಇದರ 101ನೇ ಮಹಾಸಭೆಯು ಸಚ್ಚಿದಾನಂದ ಸೇವಾ ಸದನ ದರ್ಬೆ ಇಲ್ಲಿ ನಡೆಯಿತು. ಗತವರುಷದ ವರದಿಯನ್ನು ಕಾರ್ಯದರ್ಶಿ ಮೂಲಚಂದ್ರ ಕಾಂಚನ ಸಭೆ ಮುಂದಿಟ್ಟರು. ಸದಸ್ಯರು ಸರ್ವಾನು‌ಮತದಿಂದ ಅನುಮೋದಿಸಿದರು. ನಿರ್ದೇಶಕ ಗೋಪಾಲಕೃಷ್ಣ ಕುಂಟಿನಿ ಸ್ವಾಗತಿಸಿ, ಪ್ರಾಸ್ಥಾವಿಕ ಮಾತುಗಳನ್ನಾಡಿದರು. ಬಾಲಕೃಷ್ಣ ನಾಯಕ್ ತೆಂಕಿಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಮುಂದಿನ ಯೋಚನೆ ಯೋಜನೆಗಳಿಗೆ ಸಂಪೂರ್ಣ ಸಹಕಾರವನ್ನು ಕೋರಿದರು. ವೇದಿಕೆಯಲ್ಲಿ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು. ಸರಸ್ವತಿ ಮಹಿಳಾ‌ಮಂಡಳಿಯ ಅಧ್ಯಕ್ಷೆ ರಂಜಿತಾ ಪ್ರಭು ಪ್ರಾರ್ಥಿಸಿದರು. ಸಂಘದ ನಿರ್ದೇಶಕಿ ದೇವಕಿ ಸಂಟ್ಯಾರ್ ಅಭಿನಂದನಾ ಪತ್ರ ವಾಚಿಸಿದರು. ಸಂಘದ ನಿರ್ದೇಶಕ ವಿಷ್ಣುಭಟ್ ಕರಿಂಬಿಲ ಧನ್ಯವಾದವಿತ್ತರು. ಮಲ್ಲಿಕಾ ಕುಕ್ಕಾಡಿ ಕಾರ್ಯಕ್ರಮ‌ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಎಸ್ ರಾಧಾಕೃಷ್ಣ ನಾಯಕ್ ಸುಳ್ಳಿ ದಂಪತಿಗಳನ್ನು ಸನ್ಮಾನಿಸಲಾಯಿತು. ಅಣ್ಣಾವಿನಯಚಂದ್ರ ಸನ್ಮಾನಿಸಿ, ಅಭಿನಂದನಾ ಮಾತುಗಳನ್ನಾಡಿ ಶುಭಹಾರೈಸಿದರು.

LEAVE A REPLY

Please enter your comment!
Please enter your name here