ಕೈಕಾರ ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

0

ಗ್ರಾಮಾಭಿವೃದ್ಧಿ ಯೋಜನೆಯಿಂದ ಅಭಿವೃದ್ಧಿಯಾಗಿದೆ: ರಾಮಣ್ಣ ರೈ

ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಕಾರ್ಯಕ್ಷೇತ್ರದ ಕೈಕಾರ ಜನನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವವು ಕೇಂದ್ರದ ಸದಸ್ಯೆ ಸರೋಜಿನಿಯವರ ಅಧ್ಯಕ್ಷತೆಯಲ್ಲಿ ಸೆ.29ರಂದು ನಡೆಯಿತು. ಕೈಕಾರ ಶಾಲಾ ಮುಖ್ಯಗುರು ರಾಮಣ್ಣ ರೈಯವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮಗಳಿಂದ ಮಹಿಳೆಯರಲ್ಲಿ ಬದಲಾವಣೆಯಾಗಿದೆ, ಸಮಾಜದ ಮುಖ್ಯ ವಾಹಿನಿಗೆ ಬಂದು ತಮ್ಮ ಕುಟುಂಬವನ್ನು ಬಲಿಷ್ಠರಾಗಿಸಿದ್ದಾರೆ. ಮಹಿಳೆಯರಲ್ಲಿ ಬದಲಾವಣೆಯ ಅಭಿವೃದ್ಧಿಯಾಗಲಿ ಎಂದು ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಸುಳ್ಯ ಎನ್‌ಎಮ್‌ಸಿ ಕಾಲೇಜಿನ ಶಿಕ್ಷಕರಾದ ಶೋಭಾ ಚರಣ್ ರಾಜ್‌ರವರು ಸಂಸ್ಕೃತಿ ಮತ್ತು ಸಂಸ್ಕಾರಗಳ ಬಗ್ಗೆ ಮಾತನಾಡಿ, ಜ್ಞಾನವಿಕಾಸ ಕೇಂದ್ರದಲ್ಲಿ ಉತ್ತಮ ಸಂಸ್ಕಾರಗಳನ್ನು ನೋಡಬಹುದು. ಈ ಸಂಸಾರಗಳನ್ನು ತಮ್ಮ ಮಕ್ಕಳಿಗೂ ಅರಿವಾಗುವಂತೆ ಮಾಡಬೇಕು ಎಂದು ಮಾಹಿತಿ ನೀಡಿದರು. ವೇದಿಕೆಯಲ್ಲಿ ವಲಯದ ಮೇಲ್ವಿಚಾರಕರಾದ ಸೋಹಾನ್ ಗೌಡ, ಪ್ರಗತಿಪರ ಕೃಷಿಕರಾದ ಚಂದ್ರಹಾಸ ರೈ, ಸ್ಥಳೀಯ ನಿವೃತ್ತ ಶಿಕ್ಷಕರಾದ ಶಾರದಾ ಶೆಟ್ಟಿ ಕೈಕಾರ ,ಒಕ್ಕೂಟದ ಅಧ್ಯಕ್ಷರಾದ ಸರೋಜ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, ಸ್ಥಳೀಯರು ಒಕ್ಕೂಟದ ಪದಾಧಿಕಾರಿಗಳು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ವಾರ್ಷಿಕೋತ್ಸವದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಸೇವಾ ಪ್ರತಿನಿಧಿ ತ್ರಿವೇಣಿ ಪಲ್ಲತ್ತಾರು ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರದ ಸದಸ್ಯೆ ವಿಮಲಾ ವಂದಿಸಿದರು.

LEAVE A REPLY

Please enter your comment!
Please enter your name here