ಕಿಶೋರ್ ಬೊಟ್ಯಾಡಿ ಪುತ್ತೂರು ದೇವಾಲಯಗಳಿಗೆ, ಸಂಘದ ಹಿರಿಯರ ಭೇಟಿ

0

ಪುತ್ತೂರು: ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಬೊಟ್ಯಾಡಿ ಅವರು ಅ.2 ರಂದು ಬೆಳಿಗ್ಗೆ ಪುತ್ತೂರಿನ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಸಂಘದ ಹಿರಿಯರನ್ನೂ ಭೇಟಿ ಮಾಡಿದ್ದಾರೆ.


ಬೆಳಿಗ್ಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಮಾಡಿದರು. ಇದೆ ಸಂದರ್ಭ ಅವರು ಸಂಘದ ಹಿರಿಯರನ್ನೂ ಭೇಟಿ ಮಾಡಿದರು. ಈ ಸಂದರ್ಭ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಬಿಜೆಪಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here