ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ: ಸ್ವಚ್ಛಭಾರತ್ ದಿವಸ್-ಕಾವುನಲ್ಲಿ ಮಾಡ್ನೂರು ಬಿಜೆಪಿ ಶಕ್ತಿಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ

0

ಕಾವು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಜೀಯವರ ಸ್ವಚ್ಛಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಮಾಡ್ನೂರು ಬಿಜೆಪಿ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಕಾವುನಲ್ಲಿ ಸ್ವಚ್ಚತಾ ಕಾರ್ಯಕ್ರಮವು ಅ.2ರಂದು ನಡೆಯಿತು.


ಮಾಡ್ನೂರು ಗ್ರಾಮದ ಕಾವು ಪಂಚವಟಿ ನಗರದಲ್ಲಿ ಬಸ್ಸು ತಂಗುದಾಣ ಮತ್ತು ಸುತ್ತ ಮುತ್ತಲಿನ ಪರಿಸರದಲ್ಲಿ ಕಸ ಕಡ್ಡಿ, ಪ್ಲಾಸ್ಟಿಕ್ ಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.
ಮಾಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ನಾರಾಯಣ ಆಚಾರ್ಯ ಮಳಿಯವರು ಸ್ವಾಗತಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ನೆ.ಮುಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಲೋಕೇಶ್ ಚಾಕೋಟೆ, ಬಿಜೆಪಿ ಮಹಿಳಾ ಮೋರ್ಛಾದ ತಾಲೂಕು ಪ್ರಧಾನ ಕಾರ್ಯದರ್ಶಿ ಚಿತ್ರಲೇಖಾ ರೈ, ಬಿಜೆಪಿ ನನ್ಯ ಬೂತ್ ಅಧ್ಯಕ್ಷ ರಾಮಣ್ಣ ನಾಯ್ಕ ಆಚಾರಿಮೂಲೆ, ಕಾರ್ಯದರ್ಶಿ ಸಂಕಪ್ಪ ಪೂಜಾರಿ ಚಾಕೋಟೆ, ಗ್ರಾ.ಪಂ ಸದಸ್ಯ ವಿಜಿತ್ ಕೆರೆಮಾರು, ಕಾರ್ಯಕರ್ತರಾದ ನಿರಂಜನ ರಾವ್ ಕಮಲಡ್ಕ, ಪ್ರಸಾದ್ ರೈ ಅಂಕೊತ್ತಿಮಾರು, ಯೋಗೀಶ್ ಕಾವು, ಚಂದ್ರಕಿರಣ್ ಕಾವು, ಚಿದಾನಂದ ಆಚಾರ್ಯ, ರಾಜೇಶ್ ಬಿ, ಸುನೀಲ್ ನಿಧಿಮುಂಡ ಸೇರಿದಂತೆ ಸ್ಥಳೀಯರು ಪಾಲ್ಗೊಂಡಿದ್ದರು. ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಕೊಚ್ಚಿರವರ ಪ್ರಾಯೋಜಕತ್ವದಲ್ಲಿ ಚಹಾ-ತಿಂಡಿ, ಪಾನೀಯದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here