ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

0

ಪುಣಚ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಜೀಯವರ ಸ್ವಚ್ಛಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರ ಹಾಗೂ ಪುಣಚ ಶಕ್ತಿ ಕೇಂದ್ರದ ವತಿಯಿಂದ ಪುಣಚ ಪರಿಯಾಲ್ತಡ್ಕ ಪೇಟೆ ಪರಿಸರ ಹಾಗು ಶೌಚಾಲಯದ ಸುತ್ತಮುತ್ತಲಿನಲ್ಲಿ ಸ್ವಚ್ಚತಾ ಕಾರ್ಯಕ್ರಮ ಅ.2ರಂದು ನಡೆಯಿತು.


ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಬಾಳೆಕಲ್ಲು, ಪುಣಚ ಮಹಾಶಕ್ತಿ ಕೇಂದ್ರದ ಪ್ರಭಾರಿ ಯತಿಂದ್ರ ಕೊಚ್ಚಿ, ದ.ಕ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಗುರುವಪ್ಪ ಪೂಜಾರಿ ದಲ್ಕಾಜೆಗುತ್ತು, ಪುಣಚ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಎಂ, ಪುಣಚ ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಸದಸ್ಯರಾದ ರಾಮಕೃಷ್ಣ ಮೂಡಂಬೈಲು, ಉದಯಕುಮಾರ್ ದಂಬೆ, ತೀರ್ಥರಾಮ ಆಜೇರು, ಅಶೋಕ ಮೂಡಂಬೈಲು, ಆನಂದ ತೊಂಡನಡ್ಕ, ಪುಣಚ ಸಹಕಾರಿ ಸಂಘದ ನಿರ್ದೇಶಕರಾದ ವಿಘ್ನೇಶ್ವರ ಭಟ್, ಕಿಶೋರ್ ಕುಮಾರ್ ಹಾಗೂ ಹಲವಾರು ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here