ಸುದಾನ ಶಾಲೆಯಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ

0

ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ದೇಶದ ಎರಡನೇ ಪ್ರಧಾನಿ ಲಾಲ್ ಬಹದ್ಧೂರ್ ಶಾಸ್ತ್ರಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗಾಂಧೀಜಿ ಮತ್ತು ಲಾಲ್ ಬಹದ್ಧೂರು ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಸರ್ಮಧರ್ಮ ಪ್ರಾರ್ಥನೆಯನ್ನು ಮಾಡಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವನಮನವನ್ನು ಸಲ್ಲಿಸಲಾಯಿತು.

ಭಗವದ್ಗೀತೆ,ಕುರಾನ್,ಬೈಬಲ್,ಆದಿಪುರಾಣ ಮತ್ತು  ದಮ್ಮ ಪದಗಳನ್ನು ಪಠಿಸುವ ಮೂಲಕ ವಿದ್ಯಾರ್ಥಿಗಳು ಸರ್ವಧರ್ಮ ಸಮನ್ವಯದ ಸಂದೇಶವನ್ನು  ನೀಡಿದರು. ಈರ್ವರು ನಾಯಕರ ಜೀವನ ಮತ್ತು ಆದರ್ಶಗಳ ಬಗೆಗೆ ವಿದ್ಯಾರ್ಥಿನಿ ಸೃಷ್ಟಿ ಎನ್ ವಿ ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾನಾಗರಾಜ್ ರವರು “ಗಾಂಧೀಜಿ ಮತ್ತು ಶಾಸ್ತ್ರೀಜಿಯಂಥ ಸ್ವಾತಂತ್ರ್ಯ ಹೋರಾಟಗಾರರಿಂದಾಗಿ ಭಾರತೀಯರೆಲ್ಲರೂ ಸ್ವಾತಂತ್ರ್ಯದ ಸೌಖ್ಯವನ್ನು  ಅನುಭವಿಸುವಂತಾಗಿದೆ. ಈ ಆಚರಣೆಯು ಈ ದಿನಕ್ಕೆ ಮಾತ್ರ ಸೀಮಿತವಾಗಬಾರದು. ಈ ಮಹಾತ್ಮರ ಆದರ್ಶ ಮತ್ತು ಸಿದ್ಧಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅನುಸರಿಸಬೇಕು. ಸತ್ಯ ಮತ್ತು ಅಹಿಂಸೆಯನ್ನೇ ಆಯುಧವಾಗಿಸಿಕೊಂಡು ಸ್ವಾತಂತ್ರ್ಯವನ್ನು ಪಡೆಯಲು ಮುನ್ನುಗ್ಗಿದ ಮಹಾತ್ಮ ಗಾಂಧೀಜಿ ಮತ್ತು ಜೈ  ಜವಾನ್ ಜೈ ಕಿಸಾನ್ ಘೋಷಣೆ ಮತ್ತು ಆಚರಣೆಯ ಮೂಲಕ ಜನಜಾಗೃತಿ ಮೂಡಿಸಿದ ಶಾಸ್ತ್ರೀಜಿಯವರು ಯುವಜನತೆಯ ಆದರ್ಶ ನಾಯಕರಾಗಬೇಕು ಎಂದು ಕರೆ ನೀಡಿದರು. 

ಉಪಮುಖ್ಯ ಶಿಕ್ಷಕಿ ಲವೀನಾ ನವೀನ್ ಹನ್ಸ್ ಮತ್ತು ಸಂಯೋಜಕರಾದ ಪ್ರತಿಮಾ ಎನ್ ಜಿ, ಗಾಯತ್ರಿ ಮತ್ತು ಅಮೃತವಾಣಿ ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕಿ ಸವಿತಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಇದನ್ನು ಶಾಲೆಯ ಸೋಶಿಯಲ್ ಕ್ಲಬ್ ಜಾಗೃತಿ ಮತ್ತು ಸುದಾನ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಆಯೋಜಿಸಿತ್ತು.

LEAVE A REPLY

Please enter your comment!
Please enter your name here