ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ

0

ಪುತ್ತೂರು: ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ,ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿಯ ಆಚರಣೆ ನಡೆಯಿತು.

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸತೀಶ್ ಭಟ್ ಮಾತನಾಡಿ ” ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರು ಈ ದೇಶ ಕಂಡ ಯುಗಪುರುಷರು. ಇಬ್ಬರೂ ಕೂಡ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮಾಡಿ ದೇಶವನ್ನು ಮುನ್ನಡೆಸಿದವರು. ಪ್ರಬಲ ಇಚ್ಛಾಶಕ್ತಿಯ ಮೂಲಕ ಬಲಿಷ್ಠ ಬ್ರಿಟಿಷರನ್ನು ಮಣಿಸಿದವರು. ವಿದ್ಯಾರ್ಥಿಗಳಾದ ನೀವೆಲ್ಲರೂ ಕೂಡ ಅವರ ಜೀವನದ ಕಥೆಯನ್ನ ಓದಿ ಪ್ರೇರಣೆಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ ಇವರು ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡಿದರು. ತದನಂತರದಲ್ಲಿ ಎಲ್ಲಾ ಅಧ್ಯಾಪಕರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪುಷ್ಪಾರ್ಚನೆಯನ್ನ ಮಾಡಿದರು.

LEAVE A REPLY

Please enter your comment!
Please enter your name here