ನೆಲ್ಯಾಡಿ ಜೇಸಿಐ ವತಿಯಿಂದ ಗಾಂಧಿಜಯಂತಿ ಆಚರಣೆ

0

ನೆಲ್ಯಾಡಿ: ಜೇಸಿಐ ನೆಲ್ಯಾಡಿ ಇದರ ವತಿಯಿಂದ ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗಾಂಧಿ ಜಯಂತಿ ಆಚರಿಸಲಾಯಿತು.


ಜೆಸಿಐ ಅಧ್ಯಕ್ಷೆ ಸುಚಿತ್ರಾ ಬಂಟ್ರಿಯಾಲ್ ಮಾಲಾರ್ಪಣೆ ಮಾಡಿದರು. ಜೆಸಿಐ ನೆಲ್ಯಾಡಿ ಘಟಕದ ಪೂರ್ವಾಧ್ಯಕ್ಷ ಪುರಂದರ ಗೌಡ ಡೆಂಜ ಅವರು ಮಾತನಾಡಿ, ರಾಷ್ಟ್ರೀಯತೆ, ತ್ಯಾಗ, ಸತ್ಯ ಹಾಗೂ ಅಹಿಂಸೆಯ ಮಾರ್ಗ ಇಂದಿನ ಯುವ ಪೀಳಿಗೆಗೆ ಅತೀ ಅಗತ್ಯವಾದ ಮೌಲ್ಯಗಳಾಗಿದೆ. ಆದ್ದರಿಂದ ಇಂತಹ ಮಹಾತ್ಮರ ಜಯಂತಿಯ ಆಚರಣೆ, ಉದ್ದೇಶವನ್ನು ಅರ್ಥೈಸಿಕೊಂಡು ಅನುಸರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.


ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು. ಮೈದಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಜೆಸಿಐ ಜೊತೆ ಕಾರ್ಯದರ್ಶಿ ಜಾಹ್ನವಿ ಐ., ಕೋಶಾಧಿಕಾರಿ ಸುಪ್ರಿತಾ ರವಿಚಂದ್ರ, ಪೂರ್ವಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಮಹಿಳಾ ಜೆಸಿಐ ಅಧ್ಯಕ್ಷೆ ಲೀಲಾ ಮೋಹನ್ ಹಾಗೂ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here