ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವಗಳಿಗೆ ಚಾಲನೆ

0

ಅ.5 ಹೊಸಅಕ್ಕಿ ನೈವೇದ್ಯ ಸಮರ್ಪಣೆ
ಅ.6 ಚಂಡಿಕಾಯಾಗ
ಅ.12 ಆಯುಧ ಪೂಜೆ

ಪುತ್ತೂರು: ಕಾರಣಿಕ ಕ್ಷೇತ್ರ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ.3ರಿಂದ ಅ.12ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ನವರಾತ್ರಿ ಉತ್ಸವಗಳಿಗೆ ಅ.3ರಂದು ಚಾಲನೆ ದೊರೆಯಿತು.


ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ, ಕ್ಷೇತ್ರದ ಪಾಷಾಣಮೂರ್ತಿ, ಗುಳಿಗ ದೈವಗಳಿಗೆ ತಂಬಿಲದೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಿತು. ನಂತರ ಸುಳ್ಯಪದವು ಶ್ರೀ ಮಹಾಲಕ್ಷ್ಮೀ ಮಹಿಳಾ ಭಜನಾ ಮಂಡಳಿಯವರಿಂದ ಭಜನೆ, ಭಕ್ತಾದಿಗಳಿಂದ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಭಜನೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನೆರವೇರಿತು.


ನವರಾತ್ರಿ ಉತ್ಸವದಲ್ಲಿ ಪ್ರತಿದಿನ ವಿವಿಧ ಭಜನಾ ಮಂಡಳಿಯವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಭಜನೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಉತ್ಸವದಲ್ಲಿ ವಿಶೇಷವಾಗಿ ಅ.5ರಂದು ಮಧ್ಯಾಹ್ನ ಶ್ರೀದೇವರಿಗೆ ಹೊಸ ಅಕ್ಕಿ ನೈವೇದ್ಯ ಸಮರ್ಪಣೆ, ದೇವಿದರ್ಶನ, ಅ.6ರಂದು ಚಂಡಿಕಾ ಯಾಗ, ಮಹಾಪೂಜೆ, ದೇವಿದರ್ಶನ, ಅ.12ರಂದು ಬೆಳಿಗ್ಗೆ ತುಲಾಭಾರ ಸೇವೆ, ಸಂಜೆ ಆಯುಧ ಪೂಜೆ, ಲಕ್ಷ್ಮೀದೇವಿ ಭಕ್ತವೃಂದದವರಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆಯೊಂದಿಗೆ ನವರಾತ್ರಿ ಉತ್ಸವವು ಸಂಪನ್ನಗೊಳ್ಳಲಿದೆ ಎಂದು ಧರ್ಮದರ್ಶಿ ಐತ್ತಪ್ಪ ಸಪಲ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here