ಮಂಗಳೂರು ವಿಭಾಗದ ಮಿಲನ್ ಪದಾಧಿಕಾರಿಗಳ ಕಾರ್ಯಗಾರ

0

ಪುತ್ತೂರು: ಭಾರತೀಯ ಜೈನ್ ಮಿಲನ್ ವಲಯ -8 ರ ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ವಿಭಾಗದ ಎಲ್ಲಾ ಮಿಲನ್ ಪದಾಧಿಕಾರಿಗಳ ಕಾರ್ಯಗಾರ 2024 ಪುತ್ತೂರು ಜೈನ್ ಮಿಲನ್ ಆತಿಥೇಯದಲ್ಲಿ ಪುತ್ತೂರು ಮಹಾವೀರ ವೆಂಚರ್‌ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವೀರಾಂಗನಾ ಸೇನಿಯಾ ಯಶೋ ವರ್ಮ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಭಾರತೀಯ ಜೈನ್ ಮಿಲನ್ ವಲಯ – 8ರ ಕಾಯಾಧ್ಯಕ್ಷರು ವೀರ್ ಪ್ರಸನ್ನ ಕುಮಾರ್ ಉಡುಪಿ, ಉಪಾರ್ಧಯಕ್ಷ ವೀರ್ ಸುದರ್ಶನ್ ಜೈನ್ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇಂಜಿನಿಯರ್ ಹಾಗೂ ಉದ್ಯಮಿ ವೀರ್ ವಿ.ಕೆ ಜೈನ್ ಪುತ್ತೂರು, ಭಾರತೀಯ ಜೈನ್ ಮಿಲನ್ ವಲಯ -8 ರ ಉಪಾಧ್ಯಕ್ಷ ವೀರ್ ಜಿತೇಶ್ ಜೈನ್ ಮಂಗಳೂರು ಭಾಗವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಲಯದ ಎಲ್ಲಾ ನಿರ್ದೇಶಕರುಗಳು, ವೀರ್ ಸುಭಾಶ್ಚಂದ್ರ ಜೈನ್ ಕಾರ್ಯದರ್ಶಿ ವಲಯ-8 ಮತ್ತು ಪುತ್ತೂರು ಜೈನ್ ಮಿಲನ್ ಅಧ್ಯಕ್ಷ ವೀರ್ ಸತೀಶ್ ಪಡಿವಾಳ್, ಕಾರ್ಯದರ್ಶಿ ವೀರ್ ರಾಜೇಶ್ ಕುಮಾರ್ ಪಿ, ಕೋಶಾಧಿಕಾರಿ ನರೇಂದ್ರ ಪಡಿವಾಳ್ ಆಸೀನರಾಗಿದ್ದರು. ವಲಯ 8ರ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿ, ಜೈನ್ ಮಿಲನ್ ಪುತ್ತೂರು ಅಧ್ಯಕ್ಷ ಸತೀಶ್ ಪಡಿವಾಳ್ ಸ್ವಾಗತಿಸಿ, ಕಾರ್ಯದರ್ಶಿ ವೀರ್ ರಾಜೇಶ್ ಕುಮಾರ್ ಪಿ ವಂದಿಸಿದರು. ಕಾರ್ಯಕ್ರಮದಲ್ಲಿ ಸುಮಾರು 125 ಜಿನ ವೀರ ವೀರಾಂಗಣೆಯವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here