ಎಸ್.ಡಿ.ಪಿ.ಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ನಾಮಪತ್ರ ಸಲ್ಲಿಕೆ 

0

ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಗೆ ಎಸ್ ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ, ಉಡುಪಿ ಜಿಲ್ಲಾ ಸಮಿತಿ ಸದಸ್ಯ ನಜೀರ್ ಉಡುಪಿ, ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮೂನಿಶ್ ಅಲಿ, ಅಡ್ಯಾರು ಗ್ರಾ. ಪಂ ಅಧ್ಯಕ್ಷ ಯಾಸೀನ್ ಅರ್ಕುಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here