ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ತೆನೆ ವಿತರಣೆ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಭಕ್ತರಿಗೆ ತೆನೆ ವಿತರಿಸಲಾಯಿತು. ಶ್ರೀ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಹರೀಶ ಉಪಾಧ್ಯಾಯ ಅವರು ದೇವಾಲಯದಲ್ಲಿ ಭತ್ತದ ತೆನೆಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ತೆನೆಯನ್ನು ವಿತರಿಸಿದರು.


ಈ ಸಂದರ್ಭ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾಯ್ಕ್, ಸದಸ್ಯರಾದ ಆರ್ತಿಲ ಕೃಷ್ಣರಾವ್, ದೇವಿದಾಸ ರೈ ಬೆಳ್ಳಿಪ್ಪಾಡಿ, ಡಾ. ರಮ್ಯ ರಾಜಾರಾಮ್, ವೆಂಕಪ್ಪ ಪೂಜಾರಿ, ಕರ್ನಾಟಕ ರಾಜ್ಯ ರೈತ ಸಂಘದ ದ.ಕ. ಜಿಲ್ಲಾಧ್ಯಕ್ಷ ರೂಪೇಶ್ ರೈ, ದೇವಾಲಯದ ವ್ಯವಸ್ಥಾಪಕ ವೆಂಕಟೇಶ ರಾವ್, ಸಿಬ್ಬಂದಿ ಕೃಷ್ಣಪ್ರಸಾದ್, ದಿವಾಕರ, ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here