ಸಂಪ್ಯದಲ್ಲಿ ಆರ್ಯಾಪು ಬಿಜೆಪಿ ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಸ್ವಚ್ಚತಾ ಅಭಿಯಾನ

0

ಪುತ್ತೂರು: ಬಿ.ಜೆ.ಪಿ ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ಬಿ.ಜೆ.ಪಿ ಆರ್ಯಾಪು ಮಹಾಶಕ್ತಿ ಕೇಂದ್ರದ ವತಿಯಿಂದ ನವಚೇತನ ಯುವಕ ಮಂಡಲ ಸಂಪ್ಯ ಹಾಗೂ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಇವರ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಅ.2ರಂದು ಸಂಪ್ಯದಿಂದ ವಿಷ್ಣುಮೂರ್ತಿ ದೇವಸ್ಥಾನದವರೆಗೆ ಸಂಪೂರ್ಣ ಸ್ವಚ್ಚತಾ ಅಭಿಯಾನ ನಡೆಸಿದರು.


ಸ್ವಚ್ಚತಾ ಅಭಿಯಾನಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿದರು. ಜನಪ್ರಿಯ ವೈದ್ಯ ಡಾ.ಸುರೇಶ್ ಪುತ್ತೂರಾಯ, ಗ್ರಾಮಾಂತರ ಮಂಡಲ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಅರ್ಯಾಪು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ ಬಿ.ಎಸ್, ಆರ್ಯಾಪು ಪಂಚಾಯತ್ ಅಧ್ಯಕ್ಷೆ ಗೀತಾ, ಅರ್ಯಾಪು ಶಕ್ತಿ ಕೇಂದ್ರದ ಪ್ರಮುಖ್ ಪ್ರಜ್ವಲ್ ಘಾಟೆ, ಆರ್ಯಾಪು ಶಕ್ತಿ ಕೇಂದ್ರ ನಿಕಟಪೂರ್ವ ಪ್ರಮುಖ್ ಜಯಂತ ಶೆಟ್ಟಿ, ಯುವಮೋರ್ಚಾ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಪವನ್ ಶೆಟ್ಟಿ ಕಂಬಳತಡ್ಡ, ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಲಕ್ಷ್ಮಣ್ ಬೈಲಾಡಿ, ವಿನ್ಯಾಸ್ ಯು.ಎಸ್., ನವಚೇತನ ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಕುಮಾರ್ ಉದಯಗಿರಿ, ಉಪಾಧ್ಯಕ್ಷ ಸುರೇಶ್ ಪೂಜಾರಿ ಸಂಪ್ಯ, ಸಂತೋಷ್ ಮುಕ್ರಂಪಾಡಿ, ರವಿನಾಥ ಗೌಡ ಬೈಲಾಡಿ ಹಾಗೂ ಸಂಘ ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here