ನಾಳೆ(ಅ.6) ಮರಾಟಿ ಸಮಾಜ ಸೇವಾ ಸಂಘದ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ

0

ಪುತ್ತೂರು: ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅ.6ರಂದು ಕೊಂಬೆಟ್ಟು ಮರಾಟಿ ಸಭಾ ಭವನದಲ್ಲಿ ನಡೆಯಲಿದೆ.


ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ, ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ದುಗ್ಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಇಲಾಖೆ,‌ಲೆಕ್ಕ ಪರಿಶೋಧನಾ ವಲಯದ ಸಹಾಯಕ ಆಯುಕ್ತ ರಮೇಶ್ಚಂದ್ರ, ಬೆಳ್ತಂಗಡಿ ಪ್ರಸನ್ನ ಆಯುರ್ವೇದ ಕಾಲೇಜಿನ ಆಯುರ್ವೇದ ಮನೋರೋಗ ಚಿಕಿತ್ಸಕಿ ಡಾ.ಅಕ್ಷತಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಅನ್ನಸಂತರ್ಪನೆ ನಡೆದು ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here