ಪುತ್ತೂರು ಶ್ರೀ ಶಾರದಾ ಭಜನಾ ಮಂದಿರಕ್ಕೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಭೇಟಿ

0

ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರಕ್ಕೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅ.5ರಂದು ಭೇಟಿ ನೀಡಿದರು.


ಮಧ್ಯಾಹ್ನ ನಡೆದ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಪ್ರಸಾದ ಸ್ವೀಕರಿಸಿದರು.


ಮಂದಿರದ ಗೌರವಾಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ಶಾಲು ಹೊದಿಸಿ ಗೌರವಿಸಿದರು, ಮಂದಿರದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅಕ್ಷರ ಯಜ್ಞ ಪುಸ್ತಕ ನೀಡಿದರು.

ಈ ಸಂದರ್ಭದಲ್ಲಿ ಮಂದಿರದ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ತಾರಾನಾಥ್ ಎಚ್, ಉಪಾಧ್ಯಕ್ಷ ಯಶವಂತ್ ಆಚಾರ್ಯ, ಜಲಜಾಕ್ಷಿ ಹೆಗ್ಡೆ, ನಿಕಟ ಪೂರ್ವ ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷೆ ಲೀಲಾವತಿ, ನಗರಸಭಾ ಸದಸ್ಯೆ ದೀಕ್ಷಾ ಪೈ, ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಸುನೀಲ್ ಆಳ್ವ, ದಯಾನಂದ ಉಜ್ರೆಮಾರ್, ಶಿವಕುಮಾರ್ ಪಿ.ಬಿ. ವಿರೂಪಾಕ್ಷ ಭಟ್, ಚಂದ್ರಶೇಖರ ರಾವ್ ಬಪ್ಪಳಿಗೆ, ನಿತೇಶ್ ಕಲ್ಲೇಗ, ಹರಿಪ್ರಸಾದ್ ಯಾದವ್, ನವೀನ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here