ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಚಂಡಿಕಾ ಯಾಗ, ದೇವಿದರ್ಶನ

0

ಪುತ್ತೂರು:ರೈಲು ನಿಲ್ದಾಣದ ಬಳಿಯ ಪುರಾತನ ಕ್ಷೇತ್ರ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ವಿಶೇಷವಾಗಿ ಅ.6ರಂದು ಸಾಮೂಹಿಕ ಚಂಡಿಕಾಯಾಗ ಹಾಗೂ ದೇವಿದರ್ಶನ ನೆರವೇರಿತು.


ಅ.3ರಂದು ಪ್ರಾರಂಭಗೊಂಡಿರುವ ನವರಾತ್ರಿ ಉತ್ಸವದಲ್ಲಿ ಪ್ರತಿದಿನ ವಿವಿಧ ಭಜನಾ ಮಂಡಳಿಯವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಭಜನೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯುತ್ತಿದೆ. ಉತ್ಸವದಲ್ಲಿ ವಿಶೇಷವಾಗಿ ಅ.5ರಂದು ಮಧ್ಯಾಹ್ನ ಶ್ರೀದೇವರಿಗೆ ಹೊಸ ಅಕ್ಕಿ ನೈವೇದ್ಯ ಸಮರ್ಪಣೆ, ದೇವಿದರ್ಶನ ನೆರವೇರಿತು.


ಅ.6ರಂದು ವೇ.ಮೂ ಶ್ರೀಕೃಷ್ಣ ಉಪಾಧ್ಯಾಯರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಪತಿ ಹೋಮದ ಬಳಿಕ ಚಂಡಿಕಾಯಾಗ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಚಂದ್ರಶೇಖರ ಮತ್ತು ಬಳಗ ಮೂಡಾಯೂರು ಇವರಿಂದ ಸ್ಯಾಕ್ಸೋಫೋಸ್ ವಾದನ ನಡೆಯಿತು. ಮಧ್ಯಾಹ್ನ ಚಂಡಿಕಾಯಾಗ ಪೂರ್ಣಾಹುತಿ, ನಂತರ ಮಹಾಲಕ್ಷ್ಮೀ ದೇವಿಗೆ ಮಹಾಪೂಜೆ, ದೇವಿ ದರ್ಶನ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆವೇರಿತು. ಸಂಜೆ ಸ್ಫೂರ್ತಿ ಯುವಕ, ಯುವತಿ ಮಂಡಲ ಬನ್ನೂರು ಇವರಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಾವಿರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ನವರಾತ್ರಿ ಉತ್ಸವದಲ್ಲಿ ಅ.12ರಂದು ಬೆಳಿಗ್ಗೆ ತುಲಾಭಾರ ಸೇವೆ, ಸಂಜೆ ಆಯುಧ ಪೂಜೆ, ಲಕ್ಷ್ಮೀದೇವಿ ಭಕ್ತವೃಂದದವರಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆಯೊಂದಿಗೆ ನವರಾತ್ರಿ ಉತ್ಸವವು ಸಂಪನ್ನಗೊಳ್ಳಲಿದೆ ಎಂದು ಧರ್ಮದರ್ಶಿ ಐತ್ತಪ್ಪ ಸಪಲ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here