ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ

0

ದೈಹಿಕ ಸದೃಢತೆಯ ಕುರಿತು ನಡೆದ ಕಾರ್ಯಾಗಾರ-ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು ಭಾಗಿ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯಲ್ಲಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ದ್ವಾರಕಾ ಕನ್ಸ್ಟ್ರಕ್ಷನ್ ಇದರ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ರವರು ಭವಿಷ್ಯದ ಯೋಧರಿಗೆ ಭದ್ರ ಬುನಾದಿ ಹಾಕುತ್ತಿರುವ ವಿದ್ಯಾಮಾತಾ ಅಕಾಡೆಮಿಗೆ ಸದಾ ನಾವು ಬೆನ್ನೆಲುಬಾಗಿ ನಿಂತು ಗ್ರಾಮೀಣ ಪ್ರದೇಶದ ಯುವ ಜನತೆ ದೇಶ ಸೇವೆಗೆ ಸೇರುವ ಕನಸನ್ನು ನನಸಾಗಿಸಲು ಬದ್ದರಾಗಿದ್ದೆವೆ ಎಂದು ವಿ. ಅಕಾಡೆಮಿ ಯ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾದ ರೋಟರಿ ಕ್ಲಬ್ ಯುವ -ಪುತ್ತೂರು ಇದರ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದರ ಮೂಲಕ ತನ್ನದೇ ಆದ ಮೈಲುಗಲ್ಲನ್ನು ಸ್ಥಾಪಿಸಿರುವ ವಿ. ಅಕಾಡೆಮಿಯು ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಕೂಡ ತರಬೇತಿ ನೀಡಿ ಯಶಸ್ವಿಯಾಗಿರುವುದು ಶ್ಲಾಘನೀಯ ಹಾಗೂ ಅಕಾಡೆಮಿಯ ಈ ಕಾರ್ಯಗಳಿಗೆ ನಾವೆಲ್ಲರೂ ಜೊತೆಯಾಗಿ ನಿಲ್ಲುವ ಕಾರ್ಯವಾಗಬೇಕು ಎಂದರು.


ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕೋಶಾಧಿಕಾರಿ ವತ್ಸಲಾ ಪದ್ಮನಾಭ ಮಾತನಾಡಿ ಸಂಸ್ಥೆಯ ಪ್ರತೀ ಕಾರ್ಯಗಳಿಗೂ ತಮ್ಮ ಬೆಂಬಲ ಘೋಷಿಸಿ ಶುಭಹಾರೈಸಿದರು.

ಮುಳಿಯ ಫಿಟ್ ನೆಸ್ ಮತ್ತು ವೆಲ್ ನೆಸ್ ಸೆಂಟರ್ ಇದರ ತರಬೇತುದಾರ ಸುನಿಲ್ ರಾಮಕೃಷ್ಣ ಭವಿಷ್ಯದ ಸೇನಾನಿಗಳಿಗೆ ತಮ್ಮ ದೈಹಿಕ ಸದೃಢತೆಯ ಜೊತೆಗೆ ತಮ್ಮ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬುದರ ಕುರಿತು ಸವಿಸ್ತಾರವಾಗಿ ತರಬೇತಿ ನೀಡಿ ಸಶಸ್ತ್ರ ಪಡೆಗಳ ನೇಮಕಾತಿಯ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ತಂದರು. ಈ ಸಂದರ್ಭದಲ್ಲಿ ಅತಿಥಿಗಳನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಸ್ವಾಗತಿಸಿ, ಸಶಸ್ತ್ರ ಪಡೆಗಳ ನೇಮಕಾತಿಯಲ್ಲಿ ದೈಹಿಕ ಸದೃಢತಾ ಪರೀಕ್ಷೆಯ ಮಹತ್ವ , ಸಂಸ್ಥೆಯ ಸಾಧನೆಯ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ವಿದ್ಯಾಮಾತಾ ಅಕಾಡೆಮಿಯ ದೈಹಿಕ ಸದೃಢತೆಯ ತರಬೇತುದಾರ ವಿಜೇತ್ ಕುಮಾರ್, ತರಬೇತುದಾರ ಚಂದ್ರಕಾಂತ್, ಚೇತನಾ ಸತೀಶ್ ಹಾಗೂ ಸಿಬ್ಬಂದಿ ಮಿಥುನ್ ರೈ ಹಾಗೂ ಸಶಸ್ತ್ರ ಪಡೆಗಳ ನೇಮಕಾತಿಯ ತರಬೇತಿಯಲ್ಲಿರುವ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸುನಿಲ್ ರಾಮಕೃಷ್ಣರವರ ನೇತೃತ್ವದಲ್ಲಿ ಯಶಸ್ವಿಯಾಗಿ ಕಾರ್ಯಾಗಾರ ನಡೆಯಿತು.

LEAVE A REPLY

Please enter your comment!
Please enter your name here