ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ – ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿಗಳಿಗೆ ಚಿನ್ನದ ಪದಕ

0

ಉಪ್ಪಿನಂಗಡಿ: ಕಳೆದ ಅಕ್ಟೋಬರ್ 3ರಿಂದ 6ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.


ಮೈಸೂರು ವಿಭಾಗವನ್ನು ಪ್ರತಿನಿಧಿಸಲು ಆಯ್ಕೆಯಾದ ಉಪ್ಪಿನಂಗಡಿ ಕಾಲೇಜಿನ ವಿದ್ಯಾರ್ಥಿಗಳಾದ ಚರಣ್, ಮಹಮ್ಮದ್ ಫಾರಾನ್, ಲಿಖಿತ ಹಾಗೂ ಧನು಼ಷ್ ಇವರುಗಳು ಪುರುಷರ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈ ವಿದ್ಯಾರ್ಥಿಗಳು ಈ ಹಿಂದೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಮೈಸೂರು ವಿಭಾಗ ದಸರಾ ಕ್ರೀಡಾಕೂಟಗಳಲ್ಲಿ ಪ್ರತಿನಿಧಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.

LEAVE A REPLY

Please enter your comment!
Please enter your name here