ಪುತ್ತೂರು ಶಾರದೋತ್ಸವ: ಶಾರದಾ ವಿಗ್ರಹ ಪ್ರತಿಷ್ಠೆ

0

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೋತ್ಸವ ಅಂಗವಾಗಿ ಅ.09ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಿತು.


ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಪುತ್ತೂರು ಉಳ್ಳಾಳ್ತಿ ಕಟ್ಟೆ ಸಮೀಪದ ಪ್ರಭು ಸ್ಟುಡಿಯೋರವರ ನಿವಾಸದಲ್ಲಿ ಶ್ರೀ ದೇವಿಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಮುಖ್ಯರಸ್ತೆಯಿಂದಾಗಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರದಕ್ಷಿಣೆ ಸಲ್ಲಿಸಿ ಭಜನಾ ಮಂದಿರದಲ್ಲಿ ಪ್ರತಿಷ್ಠೆ ಮಾಡಲಾಯಿತು.


ಮಂದಿರದ ಅರ್ಚಕ ಹರಿಪ್ರಸನ್ನ ಸರೋಳಿತ್ತಾಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಮಂದಿರದ ಗೌರವಾಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ, ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಂತ ಉರ್ಲಾಂಡಿ, ಕೋಶಾಧಿಕಾರಿ ತಾರನಾಥ್ ಹೆಚ್., ಉಪಾಧ್ಯಕ್ಷರಾದ ಯಶವಂತ ಆಚಾರ್ಯ, ದಯಾನಂದ (ಆದರ್ಶ) ಜತೆ ಕಾರ್ಯದರ್ಶಿಗಳಾದ ಸುಧೀರ್ ಕಲ್ಲಾರೆ, ಹೊರೆಕಾಣಿಕೆ ಸಮಿತಿ ಸಂಚಾಲಕ ರಾಜೇಶ್ ಬನ್ನೂರು, ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯಕರಸೇವಕರ ತಂಡದ ಸದಸ್ಯರು, ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಷನ್‌ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here