ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶ್ರೀಮಾ ಕೆ ಎಚ್ ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ

0

ಕಾಣಿಯೂರು :- ಶ್ರೀ ತರಳಬಾಳು ಜಗದ್ಗುರು ವಿದ್ಯಾ ಸಂಸ್ಥೆ ಸಿರಿಗೆರೆ ಚಿತ್ರದುರ್ಗ ಜಿಲ್ಲೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಇದರ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಬೆಂಗಳೂರು ವಿಭಾಗ ಮತ್ತು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಶ್ರೀಮಾ ಕೆ ಎಚ್(8 ನೇ) ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜಿತ ದಂಪತಿಗಳ ಸುಪುತ್ರಿ.


ಇವರಿಗೆ ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ಇವರು ಸೂಕ್ತ ತರಬೇತಿ ನೀಡಿರುತ್ತಾರೆ. ವಿಜೇತರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಸಂಸ್ಥೆಯ ಮುಖ್ಯ ಗುರುಗಳು ಮತ್ತು ಎಲ್ಲಾ ಶಿಕ್ಷಕ ವೃಂದ , ಶಿಕ್ಷಕೇತರ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here